ಹಳೆಗೇಟು:ಗಣೇಶೋತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಹಾಗೂ ಸನ್ಮಾನ ಕಾರ್ಯಕ್ರಮ

0

ಹಳಗೇಟು: ಸಾಂಸ್ಕೃತಿಕ ಸಂಘದ ವತಿಯಿಂದ ಗಣೇಶ್ ಚತುರ್ಥಿ ಹಬ್ಬದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ ಹಾಗೂ ಸನ್ಮಾನ ಕಾರ್ಯಕ್ರಮ ಹಳೆಗೇಟು ಸಾಂಸ್ಕೃತಿಕ ಸಂಘದ ವೇದಿಕೆಯಲ್ಲಿ ಸೆ. 7 ರಂದು ನಡೆಯಿತು.

ಸಂಘದ ಅಧ್ಯಕ್ಷ ಬಿ. ಶ್ರೀನಿವಾಸ್ ರಾವ್ ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಬಳಿಕ ವೇದಿಕೆಯಲ್ಲಿ ಸನ್ಮಾನ ಕಾರ್ಯಕ್ರಮ ನಡೆದು ನಗರ ಪಂಚಾಯತ್ ಉಪಾಧ್ಯಕ್ಷ ಬುದ್ಧ ನಾಯ್ಕ್ ಹಾಗೂ ಸಂಗೀತ ಕಲಾವಿದ ವಿಜಯ್ ಕುಮಾರ್ ರವರನ್ನು ಸನ್ಮಾನಿಸಲಾಯಿತು.

ಬಳಿಕ ವೇದಿಕೆಯಲ್ಲಿ ಬೆಟ್ಟಂಪಾಡಿ ಪುಟಾಣಿ ಮಕ್ಕಳಿಂದ ಯಕ್ಷಗಾನ ನೃತ್ಯ,ಪುಟಾಣಿ ಮಕ್ಕಳ ಸಾಮೂಹಿಕ ನೃತ್ಯ ಕಾರ್ಯಕ್ರಮ,ಹಾಗೂ ಭಕ್ತಿ ಗೀತೆ ಗಾಯನ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

ಈ ಸಂಧರ್ಭದಲ್ಲಿ ಸಂಘದ ಉಪಾಧ್ಯಕ್ಷ ಬಾಲಗೋಪಾಲ ಸೇರ್ಕಜೆ, ಕಾರ್ಯದರ್ಶಿ ಶಿವನಾಥ್ ರಾವ್ ಹಳೆಗೇಟು,ಉಪ ಕಾರ್ಯದರ್ಶಿ ರಾಕೇಶ್ ಕುಂಟಿಕಾನ, ಕೋಶಾಧಿಕಾರಿ ಚಿತ್ತರಂಜನ್, ಕಾರ್ಯಕ್ರಮದ ಸಂಚಾಲಕರು ಜ್ಞಾನೇಶ್ವರ್ ಶೇಟ್,ದಿವಾಕರ ತಿಮ್ಸನ್, ರಾಮಕೃಷ್ಣ ಆಳಂಗಲ್ಯ,ಗೌತಮ್ ಭಟ್, ಸಚಿನ್ ರಾವ್,ಧನಂಜಯ ಪಂಡಿತ್,ಕಿಶನ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಸವಿತಾ ಕಿರಣ ಇವರ ಸಾರಥ್ಯದಲ್ಲಿ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು.

ನೂರಾರು ಮಂದಿ ಭಕ್ತಾದಿಗಳು ಸ್ಥಳೀಯರು ಭಾಗವಹಿಸಿದ್ದರು.