ಪೆರುವಾಜೆ ದೇವಸ್ಥಾನದಲ್ಲಿ ಗಣಹೋಮ ಮತ್ತು ಅಪ್ಪ ನೈವೇದ್ಯ

0

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಉದ್ಭವ ಮಹಾಗಣಪತಿ ಸನ್ನಿಧಿಯಲ್ಲಿ ಗಣಹೋಮ ಮತ್ತು ಅಪ್ಪ ನೈವೇದ್ಯ ಸೆ.07 ರಂದು ಮಧ್ಯಾಹ್ನ ನಡೆಯಿತು.


ದೇವಸ್ಥಾನದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯ ನೆರವೇರಿಸಿದರು.


ಮಹಾಪೂಜೆ ನಡೆದ ಬಳಿಕ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.


ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಜಯಪ್ರಕಾಶ್ ಅಲೆಕ್ಕಾಡಿ ಹಾಗೂ ನೂರಾರು ಜನ ಭಕ್ತಾದಿಗಳು,ದೇವಸ್ಥಾನದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.