ಬೀದಿಗುಡ್ಡೆ: ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸಂಪ್ಯಾಡಿ ಆಶ್ರಯದಲ್ಲಿ ಗಣೇಶೋತ್ಸವ

0

ಬೀದಿಗುಡ್ಡೆಯ ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸಂಪ್ಯಾಡಿ ಆಶ್ರಯದಲ್ಲಿ 45ನೇ ವರ್ಷದ ಗಣೇಶೋತ್ಸವ ಸೆ. 7ರಂದು ನಡೆಯಿತು.

ಬೆಳಿಗ್ಗೆ ಗಣಪತಿ ಹೋಮ, ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ ನೆರವೇರಿತು.

ನಂತರ ಭಜನಾ ಮಂಡಳಿಯ ಅಧ್ಯಕ್ಷ ಎಲ್ಯಣ್ಣ ಗೌಡ ಕಟ್ಟ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ನಿವೃತ್ತ ಎ.ಎಸ್.ಐ ಮೇದಪ್ಪ ಗೌಡ ಪಂಡಿ, ನಿವೃತ್ತ ಶುಶ್ರೂಷಕಿ ಶ್ರೀಮತಿ ರತ್ನಾವತಿ ಮೇದಪ್ಪ ಗೌಡ ಇವರನ್ನು ಸನ್ಮಾನಿಸಲಾಯಿತು. 2023-24ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ತೋರಿದ ಹೃತಿಕ್ ಕಾರ್ಜ ಹಾಗೂ 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಕು. ರಕ್ಷಾ ಕಟ್ಟ ಇವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಹಿರಿಯರಾದ ಜತ್ತಪ್ಪ ಗೌಡ ಸಂಪ್ಯಾಡಿ ಸನ್ಮಾನ ನೆರವೇರಿಸಿದರು. ಸೀತಾರಾಮ ಸಂಪ್ಯಾಡಿ ಸನ್ಮಾನ ಪತ್ರ ವಾಚಿಸಿದರು. ಅರ್ಗುಡಿ ವಿಶ್ವನಾಥ ರೈ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪುಟ್ಟಣ್ಣ ಕಾಪಿನಕಾಡು ವಂದಿಸಿದರು. ವಿಜಯಕುಮಾರ್ ಕಾಂಜಿ ಕಾರ್ಯಕ್ರಮ ನಿರೂಪಿಸಿದರು.