ತಾ.ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಉತ್ತಮ ಗೋಲ್ ಕೀಪರ್ ಪ್ರಶಸ್ತಿ ಪಡೆದ ಶಫೀಕ್ ಜಯನಗರರಿಗೆ ಸುದ್ದಿ ಬಿಡುಗಡೆ ಕಚೇರಿಯಲ್ಲಿ ಅಭಿನಂದನೆ

0

ಶಿಕ್ಷಣ ಇಲಾಖೆ ವತಿಯಿಂದ ಗಾಂಧಿನಗರ ಕೆಪಿಎಸ್ ಮೈದಾನದಲ್ಲಿ ನಡೆದ ಪದವಿ ಪೂರ್ವ ವಿದ್ಯಾರ್ಥಿಗಳ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟ ದಲ್ಲಿ ಪಂದ್ಯಾ ಕೂಟದ ಉತ್ತಮ ಗೋಲ್ ಕೀಪರ್ ಪ್ರಶಸ್ತಿ ಪಡೆದ ಶಫೀಕ್ ಜಯನಗರ ರವರನ್ನು ಸುಳ್ಯ ಸುದ್ದಿ ಬಿಡುಗಡೆ ಪತ್ರಿಕಾ ಕಚೇರಿಯಲ್ಲಿ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.

ಸುದ್ದಿ ಬಿಡುಗಡೆ ಪತ್ರಿಕೆಯ ಪ್ರಧಾನ ಸಂಪಾದಕರಾದ ಹರೀಶ್ ಬಂಟ್ವಾಳ್ ರವರು ನೆನಪಿನ ಕಾಣಿಕೆಯನ್ನು ನೀಡಿ ಗೌರವಿಸಿ ಮಾತನಾಡಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಸುದ್ದಿ ಕಚೇರಿಯ ವ್ಯವಸ್ಥಾಪಕ ಯಶ್ವಿತ್ ಕಾಳಮ್ಮನೆ ಹಾಗೂ ಕಚೇರಿಯ ಎಲ್ಲಾ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಶಫೀಕರ್ ಅವರು ಸುದ್ದಿ ಬಿಡುಗಡೆ ಪತ್ರಿಕೆಯ ವರದಿಗಾರ ಹಸೈನಾರ್ ಜಯನಗರ ರವರ ಪುತ್ರ ರಾಗಿದ್ದು ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಯಾಗಿದ್ದಾರೆ.

ಪತ್ರಿಕಾ ವರದಿಗಾರ ಶಿವರಾಮ ಕಜೆಮೂಲೆ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.