ಸುದ್ದಿ ಬಿಡುಗಡೆ ಮತ್ತು ಷರಾ ಪ್ರಕಾಶನದ ಆಶ್ರಯದಲ್ಲಿ ದೇಶಭಕ್ತಿ ಗಾಯನ ಸ್ಪರ್ಧೆ

0

ಸ್ನೇಹ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ

ಸುದ್ದಿ ಸಮೂಹ ಸಂಸ್ಥೆ ಸುಳ್ಯ ಮತ್ತು ಷರಾ ಪ್ರಕಾಶನ ಸುಳ್ಯ ಇದರ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ದೇಶ ಭಕ್ತಿಗೀತೆ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ಸುಳ್ಯದ ಸ್ನೇಹ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಸೆ.10ರಂದು ಸ್ನೇಹ ಶಾಲೆಯಲ್ಲಿ ನಡೆಯಿತು.

ಸ್ನೇಹ ಶಿಕ್ಷಣ ಸಂಸ್ಥೆಯ ಸಂಚಾಲಕ ಚಂದ್ರಶೇಖರ್ ದಾಮ್ಲೆಯವರು ಕಾರ್ಯಕ್ರಮದ ಅಧ್ಯಕ್ಷರೆ ವಹಿಸಿ, ವಿದ್ಯಾಸಂಸ್ಥೆಯಲ್ಲಿ ಸಾಂಸ್ಕೃತಿಕ ವಿಕಸನಕ್ಕೆ ಸುದ್ದಿ ಬಿಡುಗಡೆ ಪತ್ರಿಕೆ ಆದ್ಯತೆ ‌ನೀಡುತ್ತಿರುವುದು ಶ್ಲಾಘನೀಯ ” ಎಂದರು.

ಸುದ್ದಿ ಬಿಡುಗಡೆಯ ಮುಖ್ಯ ವರದಿಗಾರ ಶಿವಪ್ರಸಾದ್ ಕೇರ್ಪಳ, ಸುದ್ದಿ ವೆಬ್ಸೈಟ್ ವಿಭಾಗದ ಜಯಶ್ರೀ ಕೊಯಿಂಗೋಡಿ ಉಪಸ್ಥಿತರಿದ್ದರು.

ಸುದ್ದಿ ಬಿಡುಗಡೆ ವರದಿಗಾರ ಶಿವಪ್ರಸಾದ್ ಆಲೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಸಂಸ್ಥೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ‌ ವಂದಿಸಿದರು.

ಶಾಲಾ ಶಿಕ್ಷಕಿಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.