ಗಾಂಧಿನಗರ :ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ಸರ್ಕಲ್ ಸಮಾವೇಶ,ಮೀಲಾದ್ ಸಂಗಮ ಹಾಗೂ ಅನುಷ್ಮರಣೆ

0

ಕರ್ನಾಟಕ ಮುಸ್ಲಿಂ ಜಮಾಅತ್ ಸುಳ್ಯ ಸರ್ಕಲ್ ಸಮಾವೇಶ,ಮೀಲಾದ್ ಸಂಗಮ ಹಾಗೂ ಸಯ್ಯಿದ್ ಕೂರತ್ ತಂಙಳ್ ರವರ ಅನುಷ್ಮರಣೆ ಸೆ 10 ರಂದು ಗಾಂಧಿನಗರ ಸುನ್ನಿ ಸೆಂಟರ್ ನಲ್ಲಿ ನಡೆಯಿತು.

ಕಾರ್ಯಕ್ರಮದ ಆರಂಭದಲ್ಲಿ ಸಯ್ಯಿದ್ ಕೂರತ್ ತಂಙಳ್ ರವರ ಹೆಸರಿನಲ್ಲಿ ಮೌಲಿದ್ ಪಾರಾಯಣ ಹಾಗೂ ದುವಾ ಮಜ್ಲೀಸ್ ನಡೆಯಿತು.

ಬಳಿಕ ಸುನ್ನಿ ಮದರಸಾ ಮ್ಯಾನೇಜ್ಮೆಂಟ್ ಅಸೋಸಿಯೇಷನ್ ಇದರ ಸುಳ್ಯ ರೀಜಿನಲ್ ಸಮಿತಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕರವರು ಅನುಸ್ಮರಣಾ ಭಾಷಣವನ್ನು ಮಾಡಿದರು.

“ನಾಯಕತ್ವವನ್ನು ಅನುಭವಿಸಿ, ಸಂಘಟನೆಯನ್ನು ಬಲಪಡಿಸಿ”ಎಂಬ ವಿಷಯದಲ್ಲಿ ವಾಗ್ಮಿ ಮೌಲಾನಾ ಬಶೀರ್ ಮದನಿ ಕೂಳೂರು ಮಾಹಿತಿ ನೀಡಿ ಸಮಾವೇಶದ ಉದ್ದೇಶದ ಬಗ್ಗೆ ತಿಳಿಸಿದರು.

ಕಾರ್ಯಕ್ರಮದಲ್ಲಿ ಸುಳ್ಯ ತಾಲೂಕು ಸುನ್ನಿ ಸಂಯುಕ್ತ ಜಮಾಅತ್ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆ ಗೊಂಡಿರುವ ಮಹಮ್ಮದ್ ಕುಂಞಿ ಗೂನಡ್ಕ ಹಾಗೂ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಮೀದ್ ಬೀಜ ಕೊಚ್ಚಿ ಅವರನ್ನು ಸಂಘಟನೆಯ ವತಿಯಿಂದ ಗೌರವಿಸಿ ಸ್ಮರಣಿಕೆ ನೀಡಿ ಶಾಲು ಹೊದಿಸಿ ಸನ್ಮಾನಿಸಲಾಯಿತು.

ಸಮಾವೇಶದ ಅಧ್ಯಕ್ಷತೆಯನ್ನು ಕೆ ಎಂ ಜೆ ಸುಳ್ಯ ಸರ್ಕಲ್ ಸಮಿತಿ ಅಧ್ಯಕ್ಷ ಹಾಜಿ ಉಮ್ಮರ್ ಪಿ ಎ ಗೂನಡ್ಕ ವಹಿಸಿದ್ದರು. ವೇದಿಕೆಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಜಿಲ್ಲಾ ಸಮಿತಿ ಮುಖಂಡ ಅಬ್ದುಲ್ ಹಮೀದ್ ಸುಣ್ಣಮೂಲೆ, ಎಸ್ ವೈ ಎಸ್ ಜಿಲ್ಲಾ ಹಾಗೂ ರಾಜ್ಯ ಸಮಿತಿ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಕಟ್ಟೆಕ್ಕಾರ್ಸ್ ಮೊದಲಾದವರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸುಳ್ಯ ಸರ್ಕಲ್ ವ್ಯಾಪ್ತಿಯ ಎಲ್ಲಾ ಯುನಿಟಿ ಸಮಿತಿಯ ಅಧ್ಯಕ್ಷರುಗಳು, ಪದಾಧಿಕಾರಿಗಳು,ಸದಸ್ಯರು ಭಾಗವಹಿಸಿದ್ದರು.

ಕಾರ್ಯದರ್ಶಿ ಹಸೈನಾರ್ ಜಯನಗರ ಸ್ವಾಗತಿಸಿ ಅಬ್ದುಲ್ ಹಮೀದ್ ಸುಣ್ಣ ಮೂಲೆ ನಿರೂಪಿಸಿ ವಂದಿಸಿದರು.

ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದರ್ ಹಣಗೇರಿ ಸಹಕರಿಸಿದರು.