ಇನ್ನರ್ ವೀಲ್ ಕ್ಲಬ್ ವತಿಯಿಂದ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಹಮ್ಮಿಕೊಂಡ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣ ಕಾರ್ಯಕ್ರಮ

0

ಸುಳ್ಯ ಇನ್ನರ್ ವೀಲ್ ಕ್ಲಬ್ ನಿಂದ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಗ್ರಾಮೀಣ ಭಾಗದ ಅಂಗನವಾಡಿ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಇತ್ತೀಚಿಗೆ ಏರ್ಪಡಿಸಲಾಗಿತ್ತು. ಇದರ ಬಹುಮಾನ ವಿತರಣೆ ಕಾರ್ಯಕ್ರಮ ಸೆ.11 ರಂದು ರೋಟರಿ ಸಭಾಂಗಣದಲ್ಲಿ ನಡೆಯಿತು.

ಪ್ರತಿ ವರ್ಷವೂ ಕೃಷ್ಣಾಷ್ಟಮಿ, ಶಿಕ್ಷಕರ ದಿನಾಚರಣೆಯನ್ನು ಆಚರಿಸುವುದು ವಾಡಿಕೆ. ಈ ವರ್ಷ ಸ್ವಲ್ಪ ಭಿನ್ನವಾಗಿ ಆಚರಿಸುವ ಯೋಜನೆಯನ್ನು ಹಾಕಿಕೊಂಡು ಪ್ರತಿ ಸಲ ಸುಳ್ಯ ನಗರದ ಮಕ್ಕಳಿಗೆ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನಗಳನ್ನು ನೀಡುವ ಬದಲಾಗಿ, ಗ್ರಾಮೀಣ ಪ್ರದೇಶದ ಮಕ್ಕಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಸುಳ್ಯ ಶಿಶು ಅಭಿವೃದ್ಧಿ ಇಲಾಖೆಯನ್ನು ಸಂಪರ್ಕಿಸಿ ಅವರ ಮಾರ್ಗದರ್ಶನದಂತೆ ಬೆಳ್ಳಾರೆ ವಲಯದ ಅಂಗನವಾಡಿ ಮಕ್ಕಳಿಗೆ ಕೃಷ್ಣನ ಕುರಿತಾದ ಚಿತ್ರ ಬಿಡಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇನ್ನರ್ ವೀಲ್ ಅಧ್ಯಕ್ಷ ಶ್ರೀಮತಿ ಚಿಂತನ ಸುಬ್ರಹ್ಮಣ್ಯ ವಹಿಸಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಶ್ರೀಮತಿ ಶ್ರೀದೇವಿ ನಾಗರಾಜ ಭಟ್ ಹಾಜರಿದ್ದರು.


ಡಾ. ಸ್ಮಿತಾ ಹರ್ಷ ಪ್ರಾರ್ಥಿಸಿ, ಶ್ರೀಮತಿ ಚಿಂತನ ಸ್ವಾಗತಿಸಿ, ಶ್ರೀಮತಿ ಜಯಮಣಿ ಮಾಧವ ವಂದಿಸಿ, ಡಾ.ಹರ್ಷಿತಾ ಪುರುಷೋತ್ತಮ, ಶೈಮಾ ಜಿತೇಂದ್ರ ಕಾರ್ಯಕ್ರಮ ನಿರೂಪಿಸಿದರು.