ಸೆ.14 :ಸುಬ್ರಹ್ಮಣ್ಯ ಉಪವಿಭಾಗದ ಈ ಭಾಗದಲ್ಲಿ ವಿದ್ಯುತ್ ‌ನಿಲುಗಡೆ

0

ಸೆ.14ರ ಶನಿವಾರದಂದು ಸುಬ್ರಹ್ಮಣ್ಯ 33/11ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ತುರ್ತು ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಪೂರ್ವಾಹ್ನ 10:00 ಗಂಟೆಯಿಂದ ಅಪರಾಹ್ನ 1:00 ಗಂಟೆಯವರೆಗೆ ವಿದ್ಯುತ್ ಉಪಕೇಂದ್ರದಿಂದ ವಿದ್ಯುತ್ ನಿಲುಗಡೆ ಮಾಡಲಾಗುವುದು.

ಆದ್ದರಿಂದ ಸುಬ್ರಹ್ಮಣ್ಯ ಉಪಕೇಂದ್ರದಿಂದ ಹೊರಡುವ ಹರಿಹರ, ನಡುಗಲ್ಲು, ಕುಮಾರಧಾರ, ಆದಿಶೇಷ, ಕೈಕಂಬ ಮತ್ತು ಯೇನೆಕಲ್ಲು 11ಕೆವಿ ಫೀಢರ್‌ಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕಾಗಿ ಮೆಸ್ಕಾಂ‌ ಪ್ರಕಟಣೆ ತಿಳಿಸಿದೆ.