ಮಡಿಕೇರಿ ತಾಲೂಕು ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟ

0

ಸಂಪಾಜೆ ಪ್ರೌಢಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಕೊಡಗಿನ ಮೂರ್ನಾಡಿನ ಜ್ಞಾನ ಜ್ಯೋತಿ ಎಜ್ಯುಕೇಶನ್ ಸೊಸೈಟಿ ಮತ್ತು ಮಡಿಕೇರಿ ಶಿಕ್ಷಣ ಇಲಾಖೆ ನಡೆಸಿದ ಪ್ರೌಢಶಾಲಾ ವಿದ್ಯಾರ್ಥಿಗಳ ಕ್ರೀಡಾ ಕೂಟದಲ್ಲಿ ಸಂಪಾಜೆ ಪ್ರೌಢ ಶಾಲೆಯ ಮೂವರು ವಿದ್ಯಾರ್ಥಿಗಳು ಪ್ರಶಸ್ತಿ ಪಡೆದುಕೊಂಡಿದ್ದಾರೆ.

9ನೇ ತರಗತಿಯ ರಜತ್ ಎಂ. ಎನ್. ಅವರು 800 ಮೀ. ಓಟದಲ್ಲಿ ಪ್ರಥಮ ಸ್ಥಾನ ಪಡೆದರೆ,
10 ನೇ ತರಗತಿಯ ದೀನರಾಜ್ ಬಿ. ಜೆ. ಅವರು ತಟ್ಟೆ ಎಸೆತದಲ್ಲಿ ಪ್ರಥಮ ಮತ್ತು ಭಾರದ ಗುಂಡು ಎಸೆತದಲ್ಲಿ ದ್ವಿತೀಯ ಪ್ರಶಸ್ತಿ ಪಡೆದಿದ್ದಾರೆ. 9 ನೇ ತರಗತಿಯ ಆಯಿಶತುಲ್ ಸಪುವಾನ 200 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಪ್ರೌಢಶಾಲಾ ದೈಹಿಕ ಶಿಕ್ಷಕ ಕುಶಾಲಪ್ಪ ಅವರು ಈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಸಹಕರಿಸಿದರು.