ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ

0

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರಾವಣ ಶನಿವಾರದ ಕೊನೆಯ ದಿನವಾದ ಇಂದು ಸೋಣ ಶನಿವಾರ ಬಲಿವಾಡು ಸಮಾರಾಧನೆ ಅಂಗವಾಗಿ ಶ್ರೀ ದೇವರಿಗೆ ತುಳಸಿ ಅರ್ಚನೆ ಸೇವೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು.


ಸತ್ಯನಾರಾಯಣ ದೇವರ ಪೂಜೆಯನ್ನು ಅಭಿರಾಮ ಭಟ್ ಅರಂಬೂರುರವರು ನೆರವೇರಿಸಿದರು. ದೇವಸ್ಥಾನದ ಪ್ರಧಾನ ಅರ್ಚಕ ನೀಲಕಂಠ ಭಟ್‌ರವರು ದೇವಸ್ಥಾನದಲ್ಲಿ ಪೂಜಾ ಕಾರ್ಯಗಳನ್ನು ನಡೆಸಿಕೊಟ್ಟರು.


ಈ ಸಂದರ್ಭದಲ್ಲಿ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು, ದೇವರ ಗಂಧ ಪ್ರಸಾದ ಸ್ವೀಕರಿಸಿದರು.