ಸುಳ್ಯ ಪೊಲೀಸ್ ಠಾಣೆಯ ಕೃಷ್ಣಪ್ಪ ಎ.ಯವರಿಗೆ ಎ.ಎಸ್.ಐ.ಆಗಿ ಭಡ್ತಿ

0

ಸುಳ್ಯ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೃಷ್ಣಪ್ಪ ಎ.ಯವರು ಎ.ಎಸ್.ಐ ಆಗಿ ಭಡ್ತಿಗೊಂಡು ಪುತ್ತೂರು ಸಂಚಾರ ಪೊಲೀಸ್ ಠಾಣೆಗೆ ಇತ್ತೀಚೆಗೆ ವರ್ಗಾವಣೆಗೊಂಡಿದ್ದಾರೆ.


ಇವರು ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ 7 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಒಂದು ತಿಂಗಳ ಹಿಂದೆ ಸುಳ್ಯ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.


ಮಂಗಳೂರು ನಗರ ಬರ್ಕೆ ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿ 5 ವರ್ಷ ಸೇವೆ ಸಲ್ಲಿಸಿದ್ದ ಇವರು ಬಳಿಕ ಮಂಗಳೂರು ನಗರ ರಾಜ್ಯ ಗುಪ್ತವಾರ್ತೆಯಲ್ಲಿ 7 ವರ್ಷ ಸೇವೆ ಸಲ್ಲಿಸಿದರು.


ನಂತರ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡು ಬೆಳ್ತಂಗಡಿ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡು ಅಲ್ಲಿ 1 ವರ್ಷ ಸೇವೆ ಸಲ್ಲಿಸಿ ಬಳಿಕ ಬೆಳ್ಳಾರೆ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿದ್ದರು.


ಇವರು ಪುತ್ತೂರು ತಾಲೂಕು ಮಾಡವು ನಿವಾಸಿಯಾಗಿದ್ದು ಇವರ ಪತ್ನಿ ಶ್ರೀಮತಿ ಅನಿತ ಗೃಹಿಣಿಯಾಗಿದ್ದಾರೆ.


ಪುತ್ರಿ ಅಶ್ವಿಕ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ 3 ನೇ ತರಗತಿಯಲ್ಲಿ ಕಲಿಯುತ್ತಿದ್ದಾರೆ.