ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದಿಂದ ಗೌರವಾಭಿನಂದನೆ ಕಾರ್ಯಕ್ರಮ

0

ಸುಳ್ಯ ತಾಲೂಕು ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವತಿಯಿಂದ ಗೌರವಾಭಿನಂದನೆ ಮತ್ತು ಮುದ್ದು ಕೃಷ್ಣ ಭಾವಚಿತ್ರ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮವು ಸೆ.15 ರಂದು ಸುಳ್ಯದ ಯುವಜನ ಸಂಯುಕ್ತ ಮಂಡಳಿ ಸಭಾಭವನದಲ್ಲಿ ನಡೆಯಿತು.


ಸಂಘದ ಅಧ್ಯಕ್ಷ ಚಂದ್ರಶೇಖರ ಪನ್ನೆ ಅಧ್ಯಕ್ಷತೆ ವಹಿಸಿದ್ದರು. ಸಂಘದ ಕಾನೂನು ಸಲಹೆಗಾರ, ಖ್ಯಾತ ನ್ಯಾಯವಾದಿ ನಾರಾಯಣ ಕೆ. ಕಾರ್ಯಕ್ರಮ ಉದ್ಘಾಟಿಸಿದರು.


ವೃತ್ತಿ ಬದುಕಿನಿಂದ ನಿವೃತ್ತಿ ಹೊಂದಿದ ಸಂಘದ ಗೌರವ ಸಲಹೆಗಾರರೂ ಆಗಿರುವ ವೆಂಕಟ್ರಮಣ ಬೇರ್ಪಡ್ಕ ಅವರನ್ನು ಸಂಘದ ಮಾಜಿ ಅಧ್ಯಕ್ಷ ಶಂಕರ ದುಗಲಡ್ಕ ಸನ್ಮಾನಿಸಿದರು. ಸಂಘದ ಆಂತರಿಕ ಲೆಕ್ಕ ಪರಿಶೋಧಕ ಮಹಾಲಿಂಗನ್ ಬಾಜರ್ತೋಟ್ಟಿ ಅಭಿನಂದನಾ ಭಾಷಣ ಮಾಡಿದರು.ಕಾರ್ಯಕ್ರಮದಲ್ಲಿ ಸುಳ್ಯ ಸುದ್ದಿ ಚಾನೆಲ್ ಮುಖ್ಯಸ್ಥ ದುರ್ಗಾಕುಮಾರ್ ನಾಯರ್‌ಕೆರೆ ವಿಶೇಷ ಉಪನ್ಯಾಸ ನೀಡಿದರು. ಲೇಖಕ ಉದಯ ಭಾಸ್ಕರ್ ಸುಳ್ಯ ಪಾಟಾಳಿ ಸಮುದಾಯದ ಆಚಾರ ವಿಚಾರಗಳ ವಿಶೇಷತೆ ಬಗ್ಗೆ ಮಾತನಾಡಿದರು. ಇದೇ ಕಾರ್ಯಕ್ರಮದಲ್ಲಿ ಯುವಜನ ಸಂಯುಕ್ತ ಮಂಡಳಿಯ ನೂತನ ಅಧ್ಯಕ್ಷ ವಿಜಯಕುಮಾರ ಉಬರಡ್ಕರವರನ್ನು ಗೌರವಿಸಲಾಯಿತು.


ಪೆರ್ಣೆ ಶ್ರೀ ಮುಚ್ಚಿಲೋಟ್ ಭಗವತಿ ಕ್ಷೇತ್ರದ ಕರಣಿಕರಾದ ಚಂದ ಕುಡೆಕಲ್ಲು, ಸಂಘದ ಮಾಜಿ ಅಧ್ಯಕ್ಷ ನಾರಾಯಣ ನಾವೂರು, ಉದ್ಯಮಿ ಪ್ರಸಾದ್ ಎ.ಎಸ್.ಜಯನಗರ ಮುಖ್ಯ ಅತಿಥಿಗಳಾಗಿದ್ದರು.

ಸಂಘದ ವತಿಯಿಂದ ಏರ್ಪಡಿಸಲಾದ ಮುದ್ದು ಕೃಷ್ಣ ಭಾವಚಿತ್ರ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಭಾಗವಹಿಸಿದ ಎಲ್ಲರಿಗೆ ಪ್ರೋತ್ಸಾಹಕರ ಬಹುಮಾನ ವಿತರಿಸಲಾಯಿತು.


ಲಕ್ಷ್ಮೀಶ ಬೆಳ್ಳಾರೆ ಪ್ರಾರ್ಥಿಸಿದರು. ಸಚಿತ್ ಕಲ್ಮಡ್ಕ ಸ್ವಾಗತಿಸಿದರು. ರಾಧಾಕೃಷ್ಣ ಬೇರ್ಪಡ್ಕ ವಂದಿಸಿದರು. ಪ್ರವೀಣ ಜಯಗರ ಕಾರ್ಯಕ್ರಮ ನಿರೂಪಿಸಿದರು.