ಎಲಿಮಲೆ: ಅಕ್ಟೋಬರ್ 25ರಂದು ನಡೆಯಲಿರುವ ತಾಲೂಕು ಮಟ್ಟದ ಕ್ರೀಡಾಕೂಟ “ಕ್ರೀಡಾ ವೈಭವ -2024″ರ ಅಂಗವಾಗಿ ಅದೃಷ್ಟ ಚೀಟಿ (ಲಕ್ಕಿ ಕೂಪನ್) ಬಿಡುಗಡೆ

0
   ಕರ್ನಾಟಕ ಸರಕಾರ, ದ.ಕ ಜಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ಇವುಗಳ ಆಶ್ರಯದಲ್ಲಿ ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ ಅಕ್ಟೋಬರ್ 25 ಮತ್ತು 26 ರಂದು ನಡೆಯಲಿರುವ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕ್ರೀಡಾಕೂಟ "ಕ್ರೀಡಾ ವೈಭವ 2024" ಕ್ಕೆ ಧನ ಸಂಗ್ರಹದ ಸಲುವಾಗಿ ಆಯೋಜಿಸಿದ ಲಕ್ಕಿ ಕೂಪನ್ ಬಿಡುಗಡೆಯು ಸೆ.16ರಂದು ನಡೆಯಿತು. 

ಜ್ಞಾನದೀಪ ವಿದ್ಯಾಸಂಸ್ಥೆಯ ಸಂಚಾಲಕರಾದ ಎ.ವಿ. ತೀರ್ಥರಾಮ ಅಂಬೆಕಲ್ಲು ಈ ಲಕ್ಕಿ ಕೂಪನ್ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ ಡಿ ಎಂ ಸಿ ಅಧ್ಯಕ್ಷರಾದ ಧನಂಜಯ ಬಾಳೆತೋಟ ವಹಿಸಿದ್ದರು.

ಅತಿಥಿಗಳಾಗಿ ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲು , ನಿವೃತ್ತ ಮೂಖ್ಯೋಪಾಧ್ಯಾಯರಾದ ಪುರುಷೋತ್ತಮ ಗೌಡ ಕೇಪಳಕಜೆ, ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷರಾದ ವಿಷ್ಣುಭಟ್ ಮೂಲೆತೋಟ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ರಾಜೇಶ್ ಅಂಬೆಕಲ್ಲು, ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ ಕೆ ವೇದಿಕೆಯಲ್ಲಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳು, ಕ್ರೀಡಾಭಿಮಾನಿಗಳು, ಶಿಕ್ಷಕರು ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕರಾದ ಮುರಳಿಧರ ಪುನುಕುಟ್ಟಿ ಕಾರ್ಯಕ್ರಮ ನಿರೂಪಿಸಿದರು.