ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನಾಚರಣೆಯ ಪ್ರಯುಕ್ತ ಮರ್ಕಂಜದಲ್ಲಿ ಸ್ವಚ್ಛತಾ ಕಾರ್ಯಕ್ರಮ

0

ಪ್ರಧಾನಿ ನರೇಂದ್ರ ಮೋದಿಯವರ ಜನ್ಮ ದಿನಾಚರಣೆಯ ಪ್ರಯುಕ್ತ ಮರ್ಕಂಜ ಶಕ್ತಿಕೇಂದ್ರದ 212ನೇ ಬೂತ್ ನ ರೆಂಜಾಳ ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ಸೆ.17ರಂದು ಸ್ವಚ್ಛತೆಯನ್ನು ಮಾಡಲಾಯಿತು.

ಬಿಜೆಪಿ ಮಂಡಲ ಸಮಿತಿ ಮಾಜಿ ಅಧ್ಯಕ್ಷರು, ಅಟಲ್ ಚಾರಿಟೇಬಲ್ ಟ್ರಸ್ಟ್ ಸುಳ್ಯ ಇದರ ಅಧ್ಯಕ್ಷರು, ಶ್ರೀ ಕ್ಷೇತ್ರ ರೆಂಜಾಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಯವರು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು. ಬಳಿಕ ಹೈದಂಗೂರಿನ ಎಸ್ಸಿ ಕಾಲನಿಯಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮರ್ಕಂಜ ಬಿಜೆಪಿ ಶಕ್ತಿಕೇಂದ್ರದ ಅಧ್ಯಕ್ಷರಾದ ಶಂಕರನಾರಾಯಣ ಉಪಾಧ್ಯಾಯ ಹೊಸೋಳಿಕೆ, ಮಾಜಿ ತಾಲೂಕು ಪಂಚಾಯತ್ ಸದಸ್ಯೆ ಶ್ರೀಮತಿ ರಾಜೇಶ್ವರಿ ಕುಮಾರಸ್ವಾಮಿ ರೆಂಜಾಳ, ತಾಲ್ಲೂಕು ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಜಗನ್ನಾಥ ಜಯನಗರ, 212ರ ಬೂತ್ ಸಮಿತಿ ಅಧ್ಯಕ್ಷ ದಿನೇಶ್ ಕೊರತ್ತೋಡಿ, ಪ್ರಧಾನ ಕಾರ್ಯದರ್ಶಿ ಮೋನಪ್ಪ ಪೂಜಾರಿ ಹೈದಂಗೂರು, ಬೂತ್ ಸಮಿತಿ ಮಾಜಿ ಅಧ್ಯಕ್ಷ ಮಹಾಬಲ ಕಟ್ಟಕೋಡಿ ಹಾಗೂ ಪಕ್ಷದ ಹಿರಿಯ ಕಿರಿಯ ಕಾರ್ಯಕರ್ತರು ಉಪಸ್ಥಿತರಿದ್ದರು.