ಅಧಿವಕ್ತಾ ಪರಿಷತ್ ಸಂಸ್ಥಾಪನಾ ದಿನಾಚರಣೆ

0

ಸೆ.17 ರಂದು ಸುಳ್ಯದ ಎಪಿಎಂಸಿ ಸಭಾಭವನದಲ್ಲಿ ಅಧಿವಕ್ತಾ ಪರಿಷತ್ತಿನ ಸುಳ್ಯ ಘಟಕದ ವತಿಯಿಂದ ಅಧಿವಕ್ತಾ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಅಧಿವಕ್ತಾ ಪರಿಷತ್ತಿನ ಸುಳ್ಯ ಘಟಕದ ಅಧ್ಯಕ್ಷರಾದ ದಿಲೀಪ್ ಬಾಬ್ಲುಬೆಟ್ಟು ಇವರು ಅಧ್ಯಕ್ಷತೆ ವಹಿಸಿದ್ದು, ಅಧಿವಕ್ತಾಪರಿಷತ್ತಿನ ಸ್ಥಾಪನೆ ಮತ್ತು ಉದ್ದೇಶಗಳ ಬಗ್ಗೆ ಅಧಿವಕ್ತಾ ಪರಿಷತ್ ನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪುತ್ತೂರಿನ ನ್ಯಾಯವಾದಿ ಶ್ಯಾಮ್ ಪ್ರಸಾದ್ ಕೈಲಾರ್ ಮಾಹಿತಿ ನೀಡಿದರು.

ವೇದಿಕೆಯಲ್ಲಿ ಅಧಿವಕ್ತಾ ಪರಿಷತ್ತಿನ ದಕ್ಷಿಣ ಕನ್ನಡ ಜಿಲ್ಲಾ ಉಪಾಧ್ಯಕ್ಷರಾದ ಜಗದೀಶ್ ಡಿಪಿ ಹಾಗೂ ಸುಳ್ಯ ಘಟಕದ ಪ್ರಧಾನ ಕಾರ್ಯದರ್ಶಿ ರಂಜಿತ್ ಕುಕ್ಕೇಟಿ ಉಪಸ್ಥಿತರಿದ್ದರು.ಹರೀಶ್ ಬೂಡುಪನ್ನೆ ಇವರು ಅತಿಥಿಗಳನ್ನು ಸ್ವಾಗತಿಸಿ ,ಕುಸುಮಾಧರ ಕುತ್ತಿಮುಂಡ ಇವರು ವಂದನಾರ್ಪಣೆಗೈದರು.