ಸುಳ್ಯದ ನಾಡಹಬ್ಬ ಶ್ರೀ ಶಾರದಾಂಬ ದಸರಾ ಉತ್ಸವ ಸಮಿತಿಯಿಂದ ಶೃಂಗೇರಿಯಲ್ಲಿ ಆಮಂತ್ರಣ ವಿತರಣೆ

0

ಸುಳ್ಯದ ನಾಡಹಬ್ಬ ಶ್ರೀ ಶಾರದಾಂಬ ದಸರಾ ಉತ್ಸವ ಸಮಿತಿಯ ಪದಾಧಿಕಾರಿಗಳು ಶೃಂಗೇರಿ ಶ್ರೀ ಶಾರದಾಪೀಠಕ್ಕೆ ಹಾಗೂ ಜಗದ್ಗುರು ಸ್ವಾಮೀಜಿಯವರಲ್ಲಿಗೆ ತೆರಳಿ ಆಮಂತ್ರಣ ಪತ್ರಿಕೆ ನೀಡಲಾಯಿತು.

ಶ್ರೀ ಶಾರದಾ ಪೀಠದಲ್ಲಿ ಆಮಂತ್ರಣ ಪತ್ರಿಕೆ ಇರಿಸಿ, ವಿಶೇಷ ಪೂಜೆ ಸಲ್ಲಿಸಲಾಯಿತು ‌‌. ಬಳಿಕ ಜಗದ್ಗುರು ಶ್ರೀ ಭಾರತಿ ತೀರ್ಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆ ನೀಡಿ ಅವರ ಪಾದಪೂಜೆ ಮಾಡಿ ಆಶೀರ್ವಾದ ಪಡೆಯಲಾಯಿತು.

ಈ ಸಂದರ್ಭದಲ್ಲಿ ಶ್ರೀ ಶಾರದಾಂಬ ಸೇವಾ ಸಮಿತಿಯ ಅಧ್ಯಕ್ಷ ನಾರಾಯಣ ಕೇಕಡ್ಕ, ದಸರಾ ಉತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೂಡು ರಾಧಾಕೃಷ್ಣ ರೈ, ದಸರಾ ಉತ್ಸವ ಸಮಿತಿಯ ಖಜಾಂಜಿ ಸುನಿಲ್ ಕುಮಾರ್ ಕೇರ್ಪಳ ಉಪಸ್ಥಿತರಿದ್ದರು.