ಅಡ್ಪಂಗಾಯ ಶ್ರೀ ಅಯ್ಯಪ್ಪ ಮಂದಿರದಲ್ಲಿ ಸಂಕ್ರಮಣ ಪೂಜೆ, ಸನ್ಮಾನ

0

ಅಡ್ಪಂಗಾಯ ಶ್ರೀ ಅಯ್ಯಪ್ಪ ಮಂದಿರದಲ್ಲಿ ಸಂಕ್ರಮಣದ ಪ್ರಯುಕ್ತ ಪೂಜಾ ಕಾರ್ಯ ಹಾಗೂ ಸನ್ಮಾನ ಕಾರ್ಯಕ್ರಮ ಸೆ. 18ರಂದು ಕ್ಷೇತ್ರದ ಧರ್ಮದರ್ಶಿ ಮತ್ತು ಗುರುಸ್ವಾಮಿಗಳಾದ ಶಿವಪ್ರಕಾಶ್ ಅಡ್ಪಂಗಾಯ ರವರ ನೇತೃತ್ವದಲ್ಲಿ ನಡೆಯಿತು. ಬೆಳಿಗ್ಗೆ ಪುರೋಹಿತರಾದ ಗಿರೀಶ್ ಭಟ್ ನೇತೃತ್ವದಲ್ಲಿ ಗಣಪತಿ ಹಾವನ ಹಾಗೂ ವೈದಿಕ ಕಾರ್ಯಕ್ರಮ ನಡೆಯಿತು. ಸಂಜೆ ದುರ್ಗಾ ಪೂಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಅಜ್ಜಾವರ ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು. ಬಳಿಕ ಶಿವಪ್ರಕಾಶ್ ಗುರುಸ್ವಾಮಿಯವರಿಂದ ಅಯ್ಯಪ್ಪ ಸ್ವಾಮಿಯ ದರ್ಶನ ಸೇವೆಯೊಂದಿಗೆ ಮಹಾಮಂಗಳಾರತಿ ನಡೆಯಿತು. ಈ ಸಂದರ್ಭದಲ್ಲಿ ಹಿರಿಯ ನಾಟಿವೈದ್ಯ ಚಂದಪ್ಪ ಗೌಡ ಪಾತಿಕಲ್ಲು ದಂಪತಿಯವರನ್ನು ಸನ್ಮಾನಿಸಲಾಯಿತು. ಪೂಜಾ ಕಾರ್ಯಕ್ರಮದ ಬಳಿಕ ಪ್ರಸಾದ್ ವಿತರಣೆ, ಅನ್ನ ಸಂಪರ್ಕ ನಡೆಯಿತು. ಸೆ. 19ರಂದು ಗುರುಸ್ವಾಮಿಯವರು 33 ಶಿಷ್ಯವೃಂದದ ಜೊತೆ ಶಬರಿಮಲೆ ಯಾತ್ರೆ ಕೈಗೊಂಡರು.