ಬೆಳ್ಳಾರೆ : ಜ್ಯೋತಿಷಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

0

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯರವರ ಬಂಧನವಾಗಿದೆ.
ಮಂಗಳೂರಿನಲ್ಲಿ ಕೌನ್ಸಿಲಿಂಗ್ ಸಂಧರ್ಭ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣ ಬೆಳಕಿಗೆ ಬಂದ ಕಾರಣ ಪ್ರಕರಣ ದಾಖಲಾಗಿದ್ದು, ಬೆಳ್ಳಾರೆ ಪೊಲೀಸರು ಸೆ.19ರ ಬೆಳಗ್ಗಿನ ಜಾವ ಪ್ರಸಾದ್ ಪಾಂಗಣ್ಣಾಯರನ್ನು ಅವರ ಮನೆಯಲ್ಲಿ ಬಂಧಿಸಿದ್ದಾರೆಂದು ತಿಳಿದುಬಂದಿದೆ.
ಹಲವು ಕಡೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಡುವ ಪ್ರಸಾದ್‌ ಪಾಂಗಣ್ಣಾಯರವರು ಕಾಣಿಯೂರು ಸಮೀಪದ ಬೆಳಂದೂರು ನಿವಾಸಿ.