ಸುಳ್ಯ: ಬಿಜೆಪಿ ಯುವ ಮೋರ್ಚಾ ವತಿಯಿಂದ ಸೇವಾ ಪಾಕ್ಷಿಕ ಅಂಗವಾಗಿ ರಕ್ತದಾನ ಶಿಬಿರ

0

ಭಾರತೀಯ ಜನತಾ ಪಾರ್ಟಿಯ ವತಿಯಿಂದ ಸೆ 17ರಿಂದ ಅ. 2ರ ತನಕ ನಡೆಯುತ್ತಿರುವ ಸೇವಾ ಪಾಕ್ಷಿಕ ಅಂಗವಾಗಿ ಸುಳ್ಯ ಮಂಡಲ ಬಿಜೆಪಿ ಯುವಮೋರ್ಚ ವತಿಯಿಂದ ಸುಳ್ಯದ ಕೆವಿಜಿ ಬ್ಲಡ್ ಬ್ಯಾಂಕ್ ನಲ್ಲಿ ರಕ್ತದಾನ ಶಿಬಿರ ನಡೆಯಿತು.

ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀಕಾಂತ್ ಮಾವಿನಕಟ್ಟೆ, ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕೊಲ್ಲರಮೂಲೆ, ಆರ್ ದಿವಾಕರ, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ವಿನಯಕುಮಾರ್ ಕಂದಡ್ಕ, ನಿಖಿಲ್ ಮಡ್ತಿಲ, ಲತೀಶ್ ಗುಂಡ್ಯ, ಆಶೀಶ್ ರಾವ್, ರಂಜಿತ್ ಜಯನಗರ, ಮಹೇಶ್ ಮೆರ್ಕಜೆ ಮತ್ತಿತರರು ಭಾಗವಹಿಸಿದ್ದರು.