ಸೆ.29 : ಸುಳ್ಯ ತಾಲೂಕು ಪಿಗ್ಮಿ ಸಂಗ್ರಾಹಕರ ಸಂಘದ ವಾರ್ಷಿಕ ಮಹಾಸಭೆ

0

ಸುಳ್ಯ ತಾಲೂಕು ಪಿಗ್ಮಿ ಸಂಗ್ರಾಹಕರ ಸಂಘದ ವಾರ್ಷಿಕ ಮಹಾಸಭೆಯು ಸೆ.29 ರಂದು ಸುಳ್ಯ ಶ್ರೀರಾಮ ಪೇಟೆಯ ಕಾನತ್ತಿಲ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆಯಲಿದೆ.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಿಗ್ಮಿ ಸಂಗ್ರಾಹಕರ ಸಂಘದ ಅಧ್ಯಕ್ಷ ಹರಿಶ್ಚಂದ್ರ ಯಂ. ವಹಿಸಲಿದ್ದಾರೆ.
ವೇದಿಕೆಯಲ್ಲಿ ಪಿಗ್ಮಿ ಸಂಗ್ರಾಹಕರ ಸಂಘದ ಕಾನೂನು ಸಲಹೆಗಾರರಾದ ದಿನೇಶ್ ಮಡಪ್ಪಾಡಿ ಉಪಸ್ಥಿತರಿರುವರು.
ಸಿ.ಎ.ಬ್ಯಾಂಕಿನ ನಿವೃತ್ತ ಲೆಕ್ಕಪರಿಶೋಧಕ ರತ್ನಾಕರ ಗೌಡ ಬಿ.ಯವರಿಗೆ ಗೌರವಾರ್ಪಣೆ ನಡೆಯಲಿದೆ.
1 ರಿಂದ 7 ನೇ ತರಗತಿವರೆಗಿನ ಸಂಘದ ಸದಸ್ಯರ ಮಕ್ಕಳಿಗೆ ಬರೆಯುವ ಪುಸ್ತಕಗಳನ್ನು ಸಂಘದ ವತಿಯಿಂದ ನೀಡಲಾಗುವುದು.
7 ,10 ಮತ್ತು 12 ನೇ ತರಗತಿಯ ವಾರ್ಷಿಕ ಪರೀಕ್ಷೆಯಲ್ಲಿ ಶೇ.90 ಕ್ಕಿಂತ ಅಧಿಕ ಅಂಕ ಪಡೆದ ಸಂಘದ ಸದಸ್ಯರ ಮಕ್ಕಳನ್ನು ಗೌರವಿಸಲಾಗುವುದು.
ಪಿಗ್ಮಿ ಸಂಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಮಹಾಸಭೆಯಲ್ಲಿ ಭಾಗವಹಿಸಬೇಕೆಂದು ಸಂಘದ ಅಧ್ಯಕ್ಷ ಹರಿಶ್ಚಂದ್ರ ಯಂ.ರವರು ತಿಳಿಸಿದ್ದಾರೆ.