ಸುಳ್ಯ ತಾಲೂಕು ಮಿಲಾದ್ ಸಮಿತಿ ವತಿಯಿಂದ ಸುಳ್ಯದಲ್ಲಿ ಬೃಹತ್ ಮೀಲಾದ್ ಕಾಲ್ನಡಿಗೆ ಜಾಥಾ

0

ಜನ ಮನ ರಂಜಿಸಿದ ಜಿಲ್ಲಾ ಹಾಗೂ ತಾಲೂಕಿನ ಪ್ರಮುಖ ಸ್ಕೌಟ್ ಹಾಗೂ ದಫ್ ತಂಡಗಳು

ಸಾವಿರಾರು ಸಂಖ್ಯೆಯಲ್ಲಿ ಮುಸ್ಲಿಂ ಬಾಂಧವರು ಭಾಗಿ

ಪ್ರವಾದಿ ಮಹಮ್ಮದ್ ಮುಸ್ತಾಫ (ಸ.ಅ)ರವರ ಜನ್ಮ ದಿನಾಚರಣೆಯ ಅಂಗವಾಗಿ ಸೆ 20 ರಂದು ಸುಳ್ಯದಲ್ಲಿ ಬೃಹತ್ ಮಿಲಾದ್ ಕಾಲ್ನಡಿಗೆ ಜಾಥಾ ಸುಳ್ಯ ಮುಖ್ಯ ರಸ್ತೆಯಲ್ಲಿ ನಡೆಯಿತು.

ಸಂಜೆ ಸುಮಾರು 5 ಗಂಟೆಗೆ ಮೊಗರ್ಪಣೆ ದರ್ಗಾ ಪರಿಸರದಲ್ಲಿ ಸ್ಥಳೀಯ ಮಸೀದಿ ಖತೀಬರಾದ ಹಾಫಿಲ್ ಸೌಕತ್ ಅಲಿ ಸಖಾಫಿ ಯವರು ಪ್ರಾರ್ಥನೆ ನೆರವೇರಿಸಿ ಕಾರ್ಯಕ್ರಮ ಉದ್ಘಾಟಿಸಿದರು.


ಮೊಗರ್ಪಣೆ ಎಚ್ ಐ ಜೆ ಕಮಿಟಿ ಅಧ್ಯಕ್ಷರಾದ ಹಾಜಿ ಇಬ್ರಾಹಿಂ ಸೀ ಫುಡ್ ಹಸಿರು ದ್ವಜವನ್ನು ತಾಲೂಕು ಮಿಲಾದ್ ಸಮಿತಿ ಅಧ್ಯಕ್ಷ ಶರೀಫ್ ಕಂಠಿಯವರಿಗೆ ಹಸ್ತಾಂತರಿಸಿ ಜಾಥಾಕ್ಕೆ ಚಾಲನೆ ನೀಡಿದರು.

ಬಳಿಕ ಮೊಗರ್ಪಣೆ ಮಸೀದಿ ವಠಾರದಿಂದ ಕಾಲ್ನಡಿಗೆ ಜಾಥಾ ಪ್ರಾರಂಭಗೊಂಡು ಗಾಂಧಿನಗರ ಪೆಟ್ರೋಲ್ ಪಂಪ್ ಮುಭಾಗದಲ್ಲಿ ಸಮಾಪ್ತಿಗೊಂಡಿತು.

ಜಾಥಾದಲ್ಲಿ ಜಿಲ್ಲಾ ಹಾಗೂ ತಾಲೂಕಿನ ಪ್ರಖ್ಯಾತ ದಫ್ ತಂಡ ಮತ್ತು ಸ್ಕೌಟ್ ತಂಡಗಳು ಭಾಗವಹಿಸಿದ್ದು,ಆಕರ್ಷಕ ಪ್ರದರ್ಶನಗಳೊಂದಿಗೆ ಸುಳ್ಯದ ಮುಖ್ಯ ರಸ್ತೆಗಳಲ್ಲಿ ಸಾಗಿ ಜನರ ಮನ ಸೆಳೆಯಿತು.

ಈ ಸಂಧರ್ಭದಲ್ಲಿ ಮುಖಂಡರುಗಳಾದ ಟಿ ಎಂ ಶಹಿದ್ ತೆಕ್ಕಿಲ್, ಹಾಜಿ ಮುಸ್ತಫಾ ಜನತಾ, ಐ ಮಹಮ್ಮದ್ ಇಕ್ಬಾಲ್ ಎಲಿಮಲೆ, ಹಾಜಿ ಇಬ್ರಾಹಿಂ ಕತ್ತರ್ ಮಂಡೆಕ್ಕೊಲು,ಶಾಹುಲ್ ಹಮೀದ್ ಕುತ್ತಮೊಟ್ಟೆ, ಅಬ್ದುಲ್ ರೈಮಾನ್ ಸಂಕೇಶ್,ಸಮಿತಿಯ ಸಂಚಾಲಕರುಗಳಾದ ಉಮ್ಮರ್ ಕೆ ಎಸ್ ಹಾಗೂ ಅಬ್ದುಲ್ ಕಲಾಂ ಸುಳ್ಯ ಸಮಿತಿಯ ಉಪಾಧ್ಯಕ್ಷರುಗಳಾದ ಸಿದ್ದೀಕ್ ಕೊಕ್ಕೋ,ಎನ್ ಎ ಜುನೈದ್, ಅಬ್ದುಲ್ ರಶೀದ್ ಜಟ್ಟಿಪಳ್ಳ , ಪ್ರಧಾನ ಕಾರ್ಯದರ್ಶಿ ಅಬ್ದುಲ್ ಹಝೀಝ್ ಸಂಗಮ್, ಜೊತೆ ಕಾರ್ಯದರ್ಶಿಗಳಾದ ಕಲಂದರ್ ಎಲಿಮಲೆ, ಮುನಾಫರ್, ಉನೈಸ್ ಪೆರಾಜೆ ಹಾಗೂ ನವಾಜ್ ಪಂಡಿತ್,ಇಕ್ಬಾಲ್ ಸುಣ್ಣಮೂಲೆ ಮೊದಲಾದವರು ಉಪಸ್ಥಿತರಿದ್ದರು. ಜಾಥಾ ದಲ್ಲಿ ನೂರಾರು ಮಂದಿ ಘೋಷಣೆ ಕೂಗುತ್ತಾ ಪಾಲ್ಗೊಂಡರು.

ಪುತ್ತೂರು ಉಪ ವಿಭಾಗದ ಪೊಲೀಸ್ ಅಧೀಕ್ಷರಾದ ಅರುಣ್ ನಾಗೇ ಗೌಡ ಹಾಗೂ ಪುತ್ತೂರು, ಉಪ್ಪಿನಂಗಡಿ, ಸುಳ್ಯ ಪೊಲೀಸ್ ವೃತ ನಿರೀಕ್ಷರುಗಳು,ಸುಳ್ಯ ಬೆಳ್ಳಾರೆ, ಸುಭ್ರಮಣ್ಯ ಪೊಲೀಸ್ ಠಾಣಾ ಉಪ ನಿರೀಕ್ಷರುಗಳು ಮತ್ತು ಪೊಲೀಸ್ ಸಿಬ್ಬಂದಿಗಳು ಬಂದೋಬಸ್ತ್ ನೀಡಿದರು.