ಗಟ್ಟಿಗಾರು ಸ.ಕಿ.ಪ್ರಾ.ಶಾಲೆಗೆ ಅಮರ ಸಂಘಟನಾ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಉಚಿತ ಬ್ಯಾಗ್ ವಿತರಣೆ

0

ಗಟ್ಟಿಗಾರು ಸ.ಕಿ.ಪ್ರಾ.ಶಾಲೆಗೆ ಅಮರ ಸಂಘಟನಾ ಸಮಿತಿ ಸುಳ್ಯ ಇದರ ಆಶ್ರಯದಲ್ಲಿ ಉಚಿತ ಬ್ಯಾಗ್ ವಿತರಣೆ
ಸೆ. 22ರಂದು ನಡೆಯಿತು.


ಸಮಾರಂಭದ ಉದ್ಘಾಟನೆ ನೆಲ್ಲೂರು ಕೆಮ್ರಾಜೆ ಗ್ರಾ.ಪಂ. ಅಧ್ಯಕ್ಷರಾದ ಧನಂಜಯ ಕುಮಾರ್ ಕೋಟೆಮೂಲೆ ನೆರವೆರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಮರ ಸಂಘಟನಾ ಸಮಿತಿ ಸುಳ್ಯ ಇದರ ಅಧ್ಯಕ್ಷ ಸಾತ್ವಿಕ್ ಮಡಪ್ಪಾಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸ.ಕಿ.ಪ್ರಾ.ಶಾಲೆ ಗಟ್ಟಿಗಾರು ಇದರ ಎಸ್ ಡಿ ಎಂ ಸಿ ಅಧ್ಯಕ್ಷ ಹರಿಪ್ರಸಾದ್ ಕೆ, ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಚಿತ್ರಾ ಬಿ ಎಸ್, ಪಿಡಬ್ಲ್ಯೂಡಿ ಗುತ್ತಿಗೆದಾರರಾದ ಹರಿಪ್ರಸಾದ್ ಎಲಿಮಲೆ, ಅಮರ ಸಂಘಟನಾ ಸಮಿತಿ ಸುಳ್ಯ ಇದರ ಗೌರವಾಧ್ಯಕ್ಷ ಪ್ರವೀಣ್ ಕುಲಾಲ್ ಉಪಸ್ಥಿತರಿದ್ದು, ಶುಭ ಹಾರೈಸಿದರು.

ಶಿಕ್ಷಕಿ ನಂದಿನಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು, ಶಿಕ್ಷಕರು, ಪೊಷಕರು, ಊರಿನ ಹಿರಿಯರು, ಅಮರ ಸಂಘಟನಾ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು.