ಸುಳ್ಯದಿಂದ ಮಂಗಳೂರು ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗುತ್ತಿದ್ದ ಅಂಬ್ಯುಲೆನ್ಸ್ ಕಬಕದಲ್ಲಿ ಅಪಘಾತ

0

ಚಾಲಕ , ಮಗು ಹಾಗೂ ಪ್ರಯಾಣಿಕರು ಅಪಾಯದಿಂದ ಪಾರು

ಸುಳ್ಯ ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಮಗುವನ್ನು ಚಿಕಿತ್ಸೆಗಾಗಿ ಕೊಂಡೊಯ್ಯುತ್ತಿದ್ದ ಸುಳ್ಯದ ಶಿವ ಅಂಬ್ಯುಲೆನ್ಸ್ ಕಬಕದಲ್ಲಿ ಅಪಘಾತ ಉಂಟಾಗಿರುವ ಬಗ್ಗೆ ಸೆ. 23 ರಂದು ಸಂಜೆ ವರದಿಯಾಗಿದೆ.

ಕಬಕ ಬಳಿ ರಸ್ತೆಗೆ ಅಡ್ಡಲಾಗಿ ಬಂದ ದೋಸ್ತ್ ವಾಹನಕ್ಕೆ ಅಂಬ್ಯುಲೆನ್ಸ್ ಡಿಕ್ಕಿ ಹೊಡೆದಿದ್ದು ವಾಹನಗಳು ಜಖಂಗೊಂಡಿದೆ.

ಕೂಡಲೇ ಬೇರೆ ವಾಹನದಲ್ಲಿ ಮಗುವನ್ನು ಮತ್ತು ಮನೆಯವರನ್ನು ಬೇರೆ ವಾಹನದಲ್ಲಿ ಮಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.