ಹಿಂದೂ ಸಂಘಟನೆಗಳ ಯುವಕರ ಬಂಧನ ವಿಚಾರ : ಸುಳ್ಯ ಠಾಣೆ ಮುಂಭಾಗ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ

0

ಅನ್ಯಮತೀಯ ಯುವಕನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದು ಸಂಘಟನೆಯ ಇಬ್ಬರನ್ನು ಬಂಧಿಸಿರುವ ಪೋಲೀಸರ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಪರಿವಾರ ಸಂಘಟನೆಯು ಪೋಲೀಸರ ಕ್ರಮದ ವಿರುದ್ಧ ಇಂದು ಪೊಲೀಸ್ ಠಾಣಾ ಮುಂಭಾಗ ಮುಖ್ಯ ರಸ್ತೆಯಲ್ಲಿ ಪ್ರತಿಭಟನೆ ನಡೆಸಿ ಪೊಲೀಸರಿಗೆ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತ ಪಡಿಸಿದರು.

ಬೆಳಿಗ್ಗೆ 9.30 ಕ್ಕೆ ಕಲ್ಕುಡ ದೈವಸ್ಥಾನದಲ್ಲಿ ಪ್ರಾರ್ಥನೆ ಮಾಡಿ, ಬಳಿಕ ಮೆರವಣಿಗೆ ಮೂಲಕ ನೂರಾರು ಮಂದಿ ಪ್ರತಿಭಟನಾಕಾರರು ಪೋಲೀಸ್ ಠಾಣೆಯ ಮುಂದೆ ಕುಳಿತು ಪ್ರತಿಭಟನೆ ನಡೆಸಿದರು.