ಸೆ.29: ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಪರಿವಾರ ದೈವಗಳ ಜೀರ್ಣೋದ್ಧಾರ ಪ್ರಯುಕ್ತ ಶ್ರಮದಾನ

0

ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಪರಿವಾರ ದೈವಗಳ ಜೀರ್ಣೋದ್ಧಾರ ಕಾರ್ಯದ ಪ್ರಯುಕ್ತ ಶ್ರಮದಾನವು ಸೆ.29ರಂದು ಜರುಗಲಿದೆ.

ಶ್ರೀ ಕ್ಷೇತ್ರದ ಪರಿವಾರ ದೈವಗಳಲ್ಲಿ ಒಂದಾದ ಕಳರಿ ಧೂಮಾವತಿ ದೈವದ ಸಾನಿಧ್ಯದಲ್ಲಿ ಶ್ರಮದಾನದ ಮೂಲಕ ಉತ್ಖನನ ಮಾಡುವುದಾಗಿ ತೀರ್ಮಾನಿಸಲಾಗಿದ್ದು, ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಜೀರ್ಣೋದ್ಧಾರ ಸಮಿತಿಯ ವತಿಯಿಂದ ವಿನಂತಿಸಿಕೊಳ್ಳಲಾಗಿದೆ.