ಅಂತೋಣಿರಾಜ್ ನಿಧನ

0

ಜಾಲ್ಸೂರು ಗ್ರಾಮದ ಕುಕ್ಕಂದೂರು ತಮಿಳು ಪುನರ್ವಸತಿದಾರರು ಹಾಗೂ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ರಬ್ಬರ್ ವಿಭಾಗದಲ್ಲಿ ಕೆಲಸ ನಿರ್ವಹಿಸಿ ನಿವೃತ್ತಿ ಹೊಂದಿದ್ದ ಅಂತೋಣಿರಾಜ್ ರವರು ಇಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಇವರಿಗೆ 61 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ ತೆರೆಸಮ್ಮ, ಪುತ್ರಿಯರು ಶೈಲಜಾ,ಮೇರಿಸುಖನ್ಯಾ, ಪುತ್ರ ಅಗಸ್ಟೀನ್ ,ಅಳಿಯಂದಿರು, ಮೊಮ್ಮಕ್ಕಳು, ಕುಟುಂಬಸ್ಥರು ಹಾಗೂ ಅಪಾರ ಬಂಧು ವರ್ಗವನ್ನು ಅಗಲಿರುತ್ತಾರೆ.