ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇತೃತ್ವದಲ್ಲಿ ಸುಳ್ಯದಲ್ಲಿ ಸದಸ್ಯತ್ವ ಅಭಿಯಾನ

0

ಭಾರತೀಯ ಜನತಾ ಪಾರ್ಟಿ ಸದಸ್ಯತನ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯು ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷ ಸತೀಶ್ ಕುಂಪಲ ಸುಳ್ಯಕ್ಕೆ ಬೇಟಿ ನೀಡಿದರು.. ಈ ಸಂದರ್ಭದಲ್ಲಿ ಸುಳ್ಯ ನಗರದ ಶಾಂತಿನಗರ 177 ಬೂತಿನ ಹಿರಿಯ ಬಾಜಪ ಮತದಾರಾದ ಮನೆಗಳಾದ ಬಿ ಎಂ ಎಸ್ ಹಿರಿಯರಾದ ಗೋಪಾಲಕೃಷ್ಣ ಭಟ್ ಹಾಗು ಹಿರಿಯ ರಾದ ಐತಪ್ಪ ನಾಯ್ಕ ಇವರ ಮನೆಗಳಿಗೆ ಭೇಟಿ ನೀಡಿ ಬಿಜೆಪಿ ಸದಸ್ಯತನ ನೋಂದಾವಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಸುಳ್ಯಮಂಡಲದ ಅಧ್ಯಕ್ಷ ವೆಂಕಟ್ ವಳಲಂಬೆ, ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಕುಸುಮಾಧರ ಎ.ಟಿ, ಹಾಗೂ ಪ್ರಧಾನ ಕಾರ್ಯ ದರ್ಶಿ ನಾರಾಯಣ ಎಸ್.ಎಂ., ನಗರ ಪಂಚಾಯಿತಿ ಅಧ್ಯಕ್ಷೆ ಶಶಿಕಲಾ ಎ, ಉಪಾಧ್ಯಕ್ಷ ಬುದ್ಧನಾಯ್ಕ, ಬೂತ್ ಅಧ್ಯಕ್ಷ ಅವಿನ್ ಸದಸ್ಯೆ ಶಿಲ್ಪಾ ಸುದೇವ್, ಪ್ರಮುಖರಾದ ಅಶೋಕ ಅಡ್ಕಾರು, ವಿಜಯ ಚಾರ್ವತ, ಶಿವಪ್ರಸಾದ್ ದಾಮೋದರ ಮಂಚಿ ಇತರರು ಉಪಸ್ಥಿತರಿದ್ದರು.