ಅರಂತೋಡು: ಅಡ್ಕಬಳೆಯಲ್ಲಿ ಕಾಡಾನೆ ದಾಳಿ ಕೃಷಿ ನಾಶ

0

ಅರಂತೋಡು ಗ್ರಾಮದ ಅಡ್ಕಬಳೆ ಪರಿಸರದಲ್ಲಿ ಕೃಷಿಕರ ತೋಟಗಳಿಗೆ ಕಾಡಾನೆಗಳು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಕೃಷಿ ನಾಶಗೊಂಡ ಘಟನೆ ಸೆ.26ರಂದು ರಾತ್ರಿ ಸಂಭವಿಸಿದೆ‌.

ಕಳೆದ ಕೆಲ ದಿನಗಳ ಹಿಂದೆ ಅರಂಬೂರಿನ ಪರಿವಾರಕಾನದಲ್ಲಿ ಕೃಷಿಕರ ತೋಟಕ್ಕೆ ದಾಳಿ ನಡೆಸಿದ್ದ ಆನೆಗಳು ಇದೀಗ ಅರಂತೋಡು ಪರಿಸರದಲ್ಲಿ ಕೃಷಿ ಹಾನಿ ನಡೆಸಿದೆ.

ಸೆ.26ರಂದು ರಾತ್ರಿ ಅಡ್ಕಬಳೆಯ ಗಂಗಾಧರ ಗೌಡ, ಲೀಲಾವತಿ ಅಡ್ಕಬಳೆ ಅವರ ಕೃಷಿ ತೋಟಕ್ಕೆ ದಾಳಿ ನಡೆಸಿ, ತೆಂಗು, ಅಡಿಕೆ ಹಾಗೂ ಬಾಳೆ ಕೃಷಿ ನಾಶಪಡಿಸಿರುವುದಾಗಿ ತಿಳಿದುಬಂದಿದೆ.