ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ರಾಜಗೋಪುರ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಹತ್ತು ಲಕ್ಷ ಅನುದಾನ ಮಂಜೂರು

0

ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದ ರಾಜಗೋಪುರ ನಿರ್ಮಾಣ ಕೆಲಸ ಕಾರ್ಯಗಳಿಗೆ ರಾಜ್ಯ ಸರ್ಕಾರದಿಂದ ಹತ್ತು ಲಕ್ಷ ರೂಪಾಯಿ ಅನುದಾನ ಮಂಜೂರುಗೊಂಡಿರುವುದಾಗಿ ತಿಳಿದುಬಂದಿದೆ.

ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಹಾಗೂ ಮುಜರಾಯಿ ಇಲಾಖೆಯ ವತಿಯಿಂದ ಹತ್ತು ಲಕ್ಷ ರೂ. ಅನುದಾ‌ನ ಮಂಜೂರುಗೊಳಿಸಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಆದೇಶ ಹೊರಡಿಸಿದ್ದಾರೆ.
ಮೂಲತ: ಪೆರಾಜೆ ಗ್ರಾಮದವರಾದ ಕಾಂಗ್ರೆಸ್ ನಾಯಕ ರಾಧಾಕೃಷ್ಣ ಕೆ.ಇ. ಅವರು ಸರ್ಕಾರದಿಂದ ದೇವಸ್ಥಾನಕ್ಕೆ ಈ ಅನುದಾನ ಮಂಜೂರುಗೊಳಿಸುವಲ್ಲಿ ಶ್ರಮಿಸಿದ್ದರು.