ಅ.3 – 12: ಕಾಯರ್ತೋಡಿ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 21ನೇ ವರ್ಷದ ನವರಾತ್ರಿ – ವಿಜಯದಶಮಿ ಮಹೋತ್ಸವ

0

ಸುಳ್ಯ ನಗರದ ಕಾಯರ್ತೋಡಿ ವಿಷ್ಣುಸರ್ಕಲ್ ವರದಾಯಿನಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ 21ನೇ ವರ್ಷದ ನವರಾತ್ರಿ – ವಿಜಯದಶಮಿ ಮಹೋತ್ಸವವು ಅ.3ರಿಂದ ಅ.12ರವರೆಗೆ ಜರುಗಲಿದೆ.

ಅ.3ರಂದು ಬೆಳಿಗ್ಗೆ ಗಣಪತಿ ಹವನ ನಡೆಯಲಿದೆ. ಅ.3ರಿಂದ 12ರವರಡಗೆ ಪ್ರತಿದಿನ ಮಧ್ಯಾಹ್ನ ಮಹಾಪೂಜೆ, ಸಂಜೆ ದೀಪಾರಾಧನೆ, ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ, ಶ್ರೀ ದುರ್ಗಾನಮಸ್ಕಾರ ಪೂಜೆ, ಅನ್ನಸಂತರ್ಪಣೆ ಜರುಗಲಿದೆ.
ಅ.9ರಂದು ಮಕ್ಕಳಿಗೆ ಅಕ್ಷರಾಭ್ಯಾಸ ನಡೆಯಲಿದೆ. ಅ.10ರಂದು ಬೆಳಿಗ್ಗೆ ಶ್ರೀ ಮಹಾಗುರು ಕಾಲಭೈರವೇಶ್ವರ ಸ್ವಾಮಿಗೆ ಅಭಿಷೇಕ ಮತ್ತು ವಿಶೇಷ ಪೂಜೆ ನಡೆಯಲಿದೆ. ಅ.11ರಂದು ಮಧ್ಯಾಹ್ನ ಮಹಾಪೂಜೆಯ ನಂತರ ವಾಹನಗಳಿಗೆ ವಾಹನ ಪೂಜೆ ನಡೆಯಲಿದೆ.

ಅ.12ರಂದು ಬೆಳಿಗ್ಗೆ ಪಂಚಾಮೃತ ಅಭಿಷೇಕದೊಂದಿಗೆ ವಿಜಯದಶಮಿ ಮಹಾಪೂಜೆ, ಭಜನಾ ಕಾರ್ಯಕ್ರಮ, ಪ್ರಸಾದ ವಿತರಣೆ, ಶ್ರೀ ದುರ್ಗಾಪರಮೇಶ್ವರಿ ದೇವಿಯ ನವಾನ್ನ ಸಂತರ್ಪಣೆಯೊಂದಿಗೆ ನವರಾತ್ರಿ ಉತ್ಸವವು ಸಮಾಪ್ತಿಗೊಳ್ಳಲಿದೆ.