ಅ.2:ಪಂಜದಲ್ಲಿ ಮಾಡಬಾಗಿಲು ಕಂಬಳ ಆನಂದ ಗೌಡ ಟ್ರಸ್ಟ್ ವತಿಯಿಂದ -ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ

0

ಮಾಡಬಾಗಿಲು ಕಂಬಳ ಆನಂದ ಗೌಡ ಟ್ರಸ್ಟ್ (ರಿ)ಕಂಬಳ ಇವರ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ 9ನೇ ವರ್ಷದ ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಅ.2 ರಂದು ಬೆಳಿಗ್ಗೆ 10:30 ರಿಂದ ಪಂಜ ಸರಕಾರಿ ಪದವಿ ಪೂರ್ವ ಕಾಲೇಜುನಲ್ಲಿ ನಡೆಯಲಿದೆ.

ಮಾಡಬಾಗಿಲು ಟ್ರಸ್ಟ್ ಅಧ್ಯಕ್ಷ ಬಿ.ಎಂ. ಆನಂದ ಗೌಡ ಕಂಬಳ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಪುತ್ತೂರು,ನಿವೃತ್ತ ಅಂಚೆ ಪಾಲಕ ಸೀತಾರಾಮ ಗೌಡ ಮುಂಡಾಳ ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಸುಳ್ಯ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಶೀತಲ್ ಯು.ಕೆ ,ಪಂಜ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ವಿಜಯಲಕ್ಷ್ಮಿ ಜಳಕದಹೊಳೆ , ರಾಜ್ಯ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯ ಶಿಕ್ಷಕ ವಾಸುದೇವ ಗೌಡ ನಡ್ಕ, ಪಂಜ ಸರಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ವೆಂಕಪ್ಪ ಗೌಡ ಕೆ , ಮುಖ್ಯ ಶಿಕ್ಷಕ ದೇವಿಪ್ರಸಾದ್ ಎ , ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಚೀನಪ್ಪ ಕಾಣಿಕೆ, ಎಸ್ ಡಿ ಎಂ ಸಿ ಅಧ್ಯಕ್ಷ ಸೋಮಶೇಖರ ಬಿ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸವಿತಾರ ಮುಡೂರು ಮತ್ತು ಟ್ರಸ್ಟಿಗಳು ಉಪಸ್ಥಿತರಿರುವರು.

2023-24 ನೇ ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಕನ್ನಡ ವಿಭಾಗದಲ್ಲಿ ಸುಳ್ಯ ತಾಲೂಕು ಮಟ್ಟದಲ್ಲಿ ವಿದ್ಯಾರ್ಥಿ ವೇತನ ಪುರಸ್ಕೃತರಿಗೆ ಹತ್ತು ಲಕ್ಷ ರೂ ವಿನ ಶಾಶ್ವತ ವಿದ್ಯಾ ನಿಧಿಯ ಬಡ್ಡಿ ಹಣ ಗಳಿಕೆಯನ್ನು ಕನ್ನಡ,ಗಣಿತ, ವಿಜ್ಞಾನ ವಿಷಯದಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿತರಿಸಲಾಗುವುದು.