ದುಗ್ಗಲಡ್ಕ ಕುರಲ್ ತುಳುಕೂಟದ ಮಾಜಿ ಅಧ್ಯಕ್ಷ ಸಿರಿಲ್ ಡಿ ಸೋಜಾರವರಿಗೆ ಶ್ರದ್ಧಾಂಜಲಿ ಸಭೆ

0

ಇತ್ತೀಚೆಗೆ ನಿಧನರಾದ ದುಗ್ಗಲಡ್ಕ ಕುರಲ್ ತುಳುಕೂಟದ ಮಾಜಿ ಅಧ್ಯಕ್ಷರು, ಧಾರ್ಮಿಕ, ಸಾಮಾಜಿಕ ಧುರೀಣರಾದ ಸಿರಿಲ್ ಡಿ ಸೋಜಾ ದುಗ್ಗಲಡ್ಕರವರಿಗೆ ಕುರಲ್ ತುಳುಕೂಟ ದುಗ್ಗಲಡ್ಕ ಮತ್ತು ಮಿತ್ರ ಯುವಕ ಮಂಡಲ ಕೊಯಿಕುಳಿ ಇದರ ಆಶ್ರಯದಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ಸೆ.29 ರಂದು ಯುವಕ ಮಂಡಲದ ಕಟ್ಟಡದಲ್ಲಿ ನಡೆಯಿತು.


ನಗರ ಪಂಚಾಯತ್ ಮಾಜಿ ಸದಸ್ಯೆ ಜೂಲಿಯಾನ ಕ್ರಾಸ್ತಾ ಮೃತರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ನುಡಿನಮನ ಸಲ್ಲಿಸಿದರು.


ಕುರಲ್ ತುಳುಕೂಟದ ಸಂಚಾಲಕ ಕೆ.ಟಿ.ವಿಶ್ವನಾಥ, ಮಾಜಿ ಅಧ್ಯಕ್ಷ ಬಾಲಕೃಷ್ಣ ನಾಯರ್ ನೀರಬಿದಿರೆ, ಮಾಜಿ ನ.ಪಂ.ಅಧ್ಯಕ್ಷೆ ಶೀಲಾವತಿ ಮಾಧವ, ಯುವಕ ಮಂಡಲದ ಮಾಜಿ ಅಧ್ಯಕ್ಷ ಶಶಿಧರ ಎಂ.ಜೆ. ಮಾತನಾಡಿದರು.


ಕುರಲ್ ತುಳುಕೂಟದ ಅಧ್ಯಕ್ಷ ರಮೇಶ್ ನೀರಬಿದಿರೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕಾರ್ಯದರ್ಶಿ ಕೆ.ಟಿ.ಭಾಗೀಶ್ ವಂದಿಸಿದರು. ಗೌರವಾಧ್ಯಕ್ಷೆ ನವ್ಯ ದಿನೇಶ್ ಕೊಯಿಕುಳಿ, ಯುವಕ ಮಂಡಲದ ಅಧ್ಯಕ್ಷ ತೀರ್ಥರಾಮ ಕೊಯಿಕುಳಿ, ಕೋಶಾಧಿಕಾರಿ ಚಂದ್ರನ್ ಕೂಟೇಲು, ಮಾಜಿ ಅಧ್ಯಕ್ಷ ನಾರಾಯಣ ಟೈಲರ್, ದಿನೇಶ್ ಕೊಯಿಕುಳಿ, ಚೇತನ್ ಕಲ್ಮಡ್ಕ ಮೊದಲಾದವರು.ಸಿರಿಲ್ ಡಿ.ಸೋಜಾರವರ ಪತ್ನಿ,ಬಂಧುಗಳು ಉಪಸ್ಥಿತರಿದ್ದರು.


ಮೃತರ ಗೌರವಾರ್ಥ ಮೌನ ಪ್ರಾರ್ಥನೆ ಮಾಡಿ, ಪುಷ್ಪನಮನ ಸಲ್ಲಿಸಲಾಯಿತು.