ಸುಳ್ಯ: ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವಾರ್ಷಿಕ ಮಹಾಸಭೆ

0

ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕಾ ಸಂಘ ಸುಳ್ಯ ತಾಲೂಕು ಇದರ ವಾರ್ಷಿಕ ಮಹಾಸಭೆಯು ತಾಲೂಕು ಸಮಿತಿಯ ಅಧ್ಯಕ್ಷ ವಾಸುದೇವ ಆಚಾರ್ಯ ಮರ್ಕಂಜ ರವರ ಅಧ್ಯಕ್ಷತೆಯಲ್ಲಿ ಬೆಳ್ಳಾರೆ ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ(ರಿ)ದಲ್ಲಿ ಸೆ. 29 ರಂದು ನಡೆಯಿತು.

ನೂತನ ಅಧ್ಯಕ್ಷರಾಗಿ ಕಮಲಾಕ್ಷ ಆಚಾರ್ಯ ಗೂನಡ್ಕ , ಕಾರ್ಯದರ್ಶಿಯಾಗಿ ತೇಜಸ್ ಆಚಾರ್ಯ ಕಲ್ಕ ,ಕೋಶಾಧಿಕಾರಿಯಾಗಿ ಗೋಪಾಲಕೃಷ್ಣ ಆಚಾರ್ಯ ಮರ್ಗಿಲಡ್ಕ ರವರನ್ನು ಆಯ್ಕೆ ಮಾಡಲಾಯಿತು.

ವಿಶ್ವಕರ್ಮ ಕಮ್ಮಾರರ ಗುಡಿ ಕೈಗಾರಿಕಾ ಸಂಘ ತಾಲೂಕು ಸಮಿತಿಯ ಅಧ್ಯಕ್ಷ ವಾಸುದೇವ ಅಚಾರ್ಯ ಮರ್ಕಂಜ, ಜಿಲ್ಲಾ ಸಮಿತಿಯ ಉಪಾಧ್ಯಕ್ಷ ರೋಹಿತ್ ಆಚಾರ್ಯ ಚೀಮುಳ್ಳು, ಬೆಳ್ಳಾರೆ ವಿಶ್ವ ಬ್ರಾಹ್ಮಣ ಸಮಾಜ ಸೇವ ಸಂಘದ ಅಧ್ಯಕ್ಷ ಸಿ ಎಚ್ ಸೋಮಶೇಖರ ಬೆಳ್ಳಾರೆ ,ಗಿರೀಶ್ ಆಚಾರ್ಯ ಪೈಲಾಜೆ ವೇದಿಯಲ್ಲಿ ಉಪಸ್ಥಿತರಿದ್ದರು.