ಉಬರಡ್ಕ: ಮರಣ ಸಾಂತ್ವನ ಧನ ಸಹಾಯ ವಿತರಣೆ

0

ಉಬರಡ್ಕ ಮಿತ್ತೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸದಸ್ಯರಾಗಿದ್ದು, ಸೆ.28 ರಂದು ನಿಧನರಾದ ವಿಶ್ವನಾಥ ನಡುಮುಟ್ಲು ಇವರ ಮರಣ ಸಾಂತ್ವನ ನಿಧಿ ರೂ.10000/- ವನ್ನು ಪುತ್ರರಾದ ಅನಿಲ್ ಮತ್ತು ತೇಜಸ್ ರವರಿಗೆ ಸೆ.28ರಂದು ಸಂಘದ ಅಧ್ಯಕ್ಷ ದಾಮೋದರ ಗೌಡ ಮದುವೆಗದ್ದೆಯವರು ವಿತರಿಸಿ ಸಾಂತ್ವನ ಹೇಳಿದರು.

ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರುಗಳಾದ ವಿಜಯಕುಮಾರ್ ಉಬರಡ್ಕ, ಹರಿಪ್ರಸಾದ್ ಪಾನತ್ತಿಲ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ಉರುಂಡೆ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಶಿವಪ್ರಸಾದ್ ಪಡ್ಪು, ಭಾಸ್ಕರ ನಡುಮುಟ್ಲು ಉಪಸ್ಥಿತರಿದ್ದರು.