ಚೆಂಬು: ಊರುಬೈಲು ಸ.ಹಿ.ಪ್ರಾ.ಶಾಲಾ ಮುಖ್ಯೋಪಾಧ್ಯಾಯ ಸೋಮಣ್ಣ ಕೆ.ಆರ್. ಶಿಕ್ಷಣ ಪ್ರಕಾಶ ಪ್ರಶಸ್ತಿಗೆ ಆಯ್ಕೆ

0

ಬೆಂಗಳೂರಿನ ಸೂರ್ಯ ಫೌಂಡೇಶನ್ ರಿ. ಮತ್ತು ಸ್ಟಾರ್ಕ್ ಅಕಾಡೆಮಿ ಬೆಂಗಳೂರು ಹಾಗೂ ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ರಾಜ್ಯಮಟ್ಟದ ಶಿಕ್ಷಣ ಪ್ರಕಾಶ ಪ್ರಶಸ್ತಿಗೆ ಚೆಂಬು ಗ್ರಾಮದ ಊರುಬೈಲು ಸ.ಹಿ.ಪ್ರಾ.ಶಾಲಾ ಮುಖ್ಯೋಪಾಧ್ಯಾಯ ಸೋಮಣ್ಣ ಕೆ.ಆರ್. ಅವರು ಆಯ್ಕೆಯಾಗಿದ್ದಾರೆ.

ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ ಜಂಟಿ ಆಶ್ರಯದಲ್ಲಿ 2024 – 25ನೇ ಶೈಕ್ಷಣಿಕ ಸಾಲಿನ ರಾಜ್ಯಮಟ್ಟದ ಅತ್ಯುತ್ತಮ ಮುಖ್ಯೋಪಾಧ್ಯಾಯರಿಗೆ ಕೊಡಮಾಡುವ ಶಿಕ್ಷಣ ಪ್ರಕಾಶ ಪ್ರಶಸ್ತಿ ಪ್ರಧಾನ ಸಮಾರಂಭವು ಅ.15ರಂದು ಬೆಂಗಳೂರಿನಲ್ಲಿ ಜರುಗಲಿದೆ.