ಶ್ರೀ ಶಾರದಾ ಪದವಿ ಪೂರ್ವ ಕಾಲೇಜು : ಗಾಂಧಿ ಜಯಂತಿ ಕಾರ್ಯಕ್ರಮ

0

ಶ್ರೀ ಶಾರದಾ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ. ಸುಳ್ಯ ಇಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಮೊದಲಿಗೆ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ಯವರ ಜಯಂತಿಯ ಪ್ರಯುಕ್ತ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ದಯಾಮಣಿ ಹಾಗೂ ಪ್ರೌಢಶಾಲಾ ಮುಖ್ಯಸ್ಥರಾದ ಶ್ರೀಮತಿ ಭಾರತಿ ದೀಪಬೆಳಗಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ನಂತರ ಎರಡೂ ಸಂಸ್ಥೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಉಪನ್ಯಾಸಕ,ಶಿಕ್ಷಕ ವೃಂದ ದವರು ಸರ್ವ ಧರ್ಮ ಪಾರ್ಥನೆ ಯನ್ನು ನೆರವೇರಿಸಿದರು. ಎಲ್ಲರಿಗೂ ಸಿಹಿತಿಂಡಿ ವಿತರಿಸಲಾಯಿತು.


ಅನಂತರ ಎಲ್ಲಾ ವಿದ್ಯಾರ್ಥಿಗಳು ಕಾಲೇಜಿನ ಸುತ್ತಮುತ್ತಲು ಹಾಗೂ ವೆಂಕಟ್ರಮಣ ಸೊಸೈಟಿಯಿಂದ ಜ್ಯೋತಿ ಸರ್ಕಲ್ ವರೆಗೆ ಸ್ವಚ್ಛತಾ ಕಾರ್ಯಕ್ರಮ ಮಾಡಿದರು. ಮುಂದೆ ಜ್ಯೋತಿ ಸರ್ಕಲ್ ನಿಂದ ಗಾಂಧೀನಗರದ ವರೆಗೆ ಹಮ್ಮಿಕೊಂಡ “ಗಾಂಧಿ ನಡಿಗೆ ” ಕಾರ್ಯಕ್ರಮ ದಲ್ಲಿ ಭಾಗವಹಿಸಿದರು. ಸಂಸ್ಥೆಯ ಎನ್ ಸಿಸಿ ತಂಡದ ಗಾಂಧಿ ನಡಿಗೆ ಆಕರ್ಷಕವಾಗಿ ಮೂಡಿಬಂದಿತ್ತು.