ಜಯನಗರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ

0

ವಿದ್ಯಾರ್ಥಿಗಳಿಂದ ಶಾಲಾ ಪರಿಸರ ಸ್ವಚ್ಛತಾ ಕಾರ್ಯ

ಜಯನಗರ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮ ನಡೆಯಿತು.
ಮಹಾತ್ಮ ಗಾಂಧಿಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರೀ ಯವರ ಭಾವಚಿತ್ರ
ಕ್ಕೆ ಪುಷ್ಪಾರ್ಚನೆ ನಡೆದು ದಿನದ ಪ್ರಾಮುಖ್ಯತೆ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಮುದ್ದಪ್ಪ ವಹಿಸಿದರು.
ಮುಖ್ಯ ಶಿಕ್ಷಕಿ ವೀಣಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಬಳಿಕ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಸೇರಿ ಶಾಲಾ ಪರಿಸರದ ಸ್ವಚ್ಛತೆ ನಡೆಸಿದರು.