ಸುಳ್ಯ ರೋಟರಿ ಕ್ಲಬ್ ವತಿಯಿಂದ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

0

ಸುಳ್ಯ ರೋಟರಿ ಕ್ಲಬ್ ಆಶ್ರಯದಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅ. 2ರಂದು ನಡೆಯಿತು.


ಸುಳ್ಯ ನಗರದಲ್ಲಿ ಸ್ವಚ್ಚತಾ ಕಾರ್ಯ ನಡೆದ ಬಳಿಕ ರೋಟರಿ ಕ್ಲಬ್ ಅಧ್ಯಕ್ಷೆ ರೊ. ಯೋಗಿತಾ ಗೋಪಿನಾಥ್ ರವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಬೆಳ್ಳಾರೆ ಪೊಲೀಸ್ ಠಾಣಾ ಉಪ ನಿರಿಕಕ್ಷಕರಾದ ಈರಯ್ಯ ದೂಂತೂರು ಅತಿಥಿಯಾಗಿ ಭಾಗವಹಿಸಿದರು. ಕ್ಲಬ್‌ನ
ನಿಕಟಪೂರ್ವ ಅಧ್ಯಕ್ಷ ರೊ. ಆನಂದ ಖಂಡಿಗ ಹಾಗೂ ಉಪಾಧ್ಯಕ್ಷ ರೊ. ಡಾ. ರಾಮ್ ಮೋಹನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ರೊ. ಮಧುರ ಜಗದೀಶ್ ರವರ ಆಶಯ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು. ರೋ ವಿಶ್ವನಾಥ್ ನಾಯರ್ ರವರ ರಘುಪತಿ ರಾಘವ ರಾಜಾರಾಮ್ ಹಾಡಿನೊಂದಿಗೆ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪನಮನ ನಡೆಯಿತು. ರೊ. ಯೋಗಿತಾ ಗೋಪಿನಾಥ್ ಸ್ವಾಗತಿಸಿ, ರೊ. ಅವಿನಾಶ್ ಡಿ.ಕೆ ವಂದಿಸಿದರು.