ಮುಡ್ನೂರು ಮರ್ಕಂಜ ಶಾಲೆಯಲ್ಲಿ ಗಾಂಧೀಜಯಂತಿ ಹಾಗೂ ವೃಕ್ಷ ರೂಪಣ್ ಕಾರ್ಯಕ್ರಮ

0

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಡ್ನೂರು ಮರ್ಕಂಜ ಇಲ್ಲಿ ಗಾಂಧೀಜಯಂತಿ ಹಾಗೂ ವೃಕ್ಷ ರೂಪಣ್ ಕಾರ್ಯಕ್ರಮವು ಆ.2 ರಂದು ನಡೆಯಿತು.

ಈ ಯೋಜನೆಗೆ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ವಿಜಯಕುಮಾರ್ ಎರ್ಮೆಟ್ಟಿ ಹಾಗೂ ಮುಖ್ಯ ಶಿಕ್ಷಕರಾದ ದೇವರಾಜ್ ಎಸ್ ಕೆ ಇವರು ಸೇರಿ ವೃಕ್ಷರೂಪಣ್ ಎಂಬ ನಾಮಕರಣವನ್ನು ಮಾಡಿದರು.

ಈ ಕಾರ್ಯಕ್ರಮವನ್ನು ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ವಿಜಯಕುಮಾರ್ ಎರ್ಮೆಟ್ಟಿ ಹಾಗೂ ಶ್ರೀ ಗಜಾನನ ಮಿತ್ರ ಮಂಡಳಿ ಬೊಮ್ಮಾರು ಇದರ ಎಲ್ಲಾ ಸದಸ್ಯರು ತೆಂಗಿನ ಗಿಡ ನೆಡುವುದರೊಂದಿಗೆ ಈ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಊರಿನ ಊರಿನ ಹಿರಿಯರು ಹಾಗೂ ಶಿಕ್ಷಕ ವೃಂದ, ಶಾಲಾ ಮೇಲುಸ್ತುವಾರಿ ಮತ್ತು ಅಭಿವೃದ್ಧಿ ಸಮಿತಿಯ ಸದಸ್ಯರು, ಹಳೆ ವಿದ್ಯಾರ್ಥಿಗಳು ಹಾಗೂ ಊರ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

ಮಧ್ಯಾಹ್ನದವರೆಗೆ ಶಾಲಾ ಆವರಣದಲ್ಲಿ ಶ್ರೀ ಗಜಾನನ ಮಿತ್ರ ಮಂಡಳಿ ಬೊಮ್ಮಾರು ಇದರ ಸದಸ್ಯರಿಂದ ಶ್ರಮದಾನ ನಡೆಯಿತು.