ಪೆರಾಜೆ : ಜ್ಯೋತಿ ಪ್ರೌಢಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ

0

ಪೆರಾಜೆ ಜ್ಯೋತಿ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜಯಂತಿ ಅ‌.2ರಂದು ನಡೆಯಿತು.


ಶಾಲಾ ಮುಖ್ಯ ಶಿಕ್ಷಕರಾದ ನಾಗರಾಜ್ ಜಿ. ಆರ್ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮದಲ್ಲಿ ಪೆರಾಜೆ ವಸತಿ ನಿಲಯದ ಮೇಲ್ವಿಚಾರಕರಾದ ವೆಂಕಟೇಶ್ ಅತಿಥಿಯಾಗಿ ಭಾಗವಹಿಸಿದರು. ಶಾಲಾ ನಿರ್ದೇಶಕರಾದ ಅಶೋಕ್ ಪೀಚೆಮನೆ , ಶಾಲಾ ಸಹ ಶಿಕ್ಷಕರಾದ ಸುಪರ್ಣ , ವೀಣಾ, ಶ್ರುತಿ , ಮಿತುಲಾ ದೈ.ಶಿಕ್ಷಣ ಶಿಕ್ಷಕ ನಿತೀನ್ ಮಜಿಕೋಡಿ ವೇದಿಕೆಯಲ್ಲಿದ್ದರು. ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಭಾವಚಿತ್ರಕ್ಕೆ ಪುಷ್ಪ ನಮನ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ 10ನೇ ತರಗತಿ ವಿದ್ಯಾರ್ಥಿಗಳಾದ ಸಚಿನ್. ಕೆ ಹಾಗೂ 9ನೇ ತರಗತಿ ವಿದ್ಯಾರ್ಥಿ ರಕ್ಷಾ .ಕೆ.ಎ. ರವರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು. ಶಾಲಾ ಸಹ ಶಿಕ್ಷಕಿ ಚಂದ್ರಮತಿ ಕುಂಬಳಚೇರಿ ಕಾರ್ಯಕ್ರಮದಲ್ಲಿ ನಿರೂಪಿಸಿದರು.