ಪೋಲೀಸರ ಕೈಯಿಂದ ತಪ್ಪಿಸಿಕೊಂಡ ಈ ವ್ಯಕ್ತಿಯನ್ನು ಹಿಡಿಯಲು ಸಹಕರಿಸಿ : ಪೋಲೀಸ್ ಮನವಿ

0

ಇಂದು ಸಂಜೆ ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದಾಗ ಪೋಲೀಸರ ಕೈಯಿಂದ ತಪ್ಪಿಸಿಕೊಂಡು ಓಡಿದ ಈ ವ್ಯಕ್ತಿಯನ್ನು ಪತ್ತೆ ಹಚ್ಚಲು ಸಹಕರಿಸುವಂತೆ ಪೋಲೀಸರು ಸಾರ್ವಜನಿಕರನ್ನು ವಿನಂತಿಸಿಕೊಂಡಿದ್ದಾರೆ.

ಸಂಪಾಜೆಯ ಮನೆಯೊಂದರಿಂದ ದರೋಡೆ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ತಪ್ಪಿಸಿಕೊಳ್ಳುತ್ತಿದ್ದ ತಮಿಳುನಾಡಿನ ಈ ವ್ಯಕ್ತಿಯನ್ನು ಪೋಲೀಸರು ತಮಿಳುನಾಡಿನಲ್ಲಿ ಹಿಡಿದು ಸುಳ್ಯಕ್ಕೆ ತಂದಿದ್ದರು. ನ್ಯಾಯಾಲಯಕ್ಕೆ ಹಾಜರುಪಡಿಸುವ ಮೊದಲು ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕಾಗಿರುವುದರಿಂದ ಸಂಜೆ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ಒಬ್ಬರು ಪೋಲೀಸ್ ಕಾನ್ ಸ್ಟೇಬಲ್ ಚೀಟಿ ಮಾಡಿಸುತ್ತಿರುವಾಗ ತನ್ನನ್ನು ಹಿಡಿದುಕೊಂಡಿದ್ದ ಇನ್ನೊಬ್ಬ ಪೋಲೀಸ್ ಕಾನ್ ಸ್ಟೇಬಲ್ ರನ್ನು ದೂಡಿ ಹಾಕಿ ಆರೋಪಿ ಓಡಿಹೋದ. ತಕ್ಷಣ ಪೋಲೀಸರು ಆತನನ್ನು ಬೆನ್ನಟ್ಟಿದರೂ ಆರೋಪಿ ಕಾನತ್ತಿಲ ಕಡೆಗೆ ತೋಟದ ಕಡೆಗೆ ಓಡಿ, ಪೋಲೀಸರಿಂದ ತಪ್ಪಿಸಿಕೊಂಡಿದ್ದಾನೆ.

ಇದೀಗ ಪೋಲೀಸರು ತಪ್ಪಿಸಿಕೊಂಡು ಓಡಿ ಅಡಗಿ ಕುಳಿತಿರುವ ಈತನನ್ನು ಹಿಡಿಯಲು ಸಾರ್ವಜನಿಕರು ಸಹಕರಿಸುವಂತೆ, ಈತನನ್ನು ಕಂಡರೆ ಪೋಲೀಸರಿಗೆ ಮಾಹಿತಿ ನೀಡುವಂತೆ ವಿನಂತಿಸಿದ್ದಾರೆ.