ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಕಚೇರಿ ಉದ್ಘಾಟನೆ

0

ದ.ಕ.ಜಿಲ್ಲೆಯ ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ನೂತನ ಕಚೇರಿಯು ಅಕ್ಟೋಬರ್ 5 ರಂದು ಮಂಗಳೂರಿನ ಒಕ್ಕಲಿಗರ ಭವನದಲ್ಲಿ ಗಣಪತಿ ಹವನದೊಂದಿಗೆ ಶುಭಾರಂಭಗೊಂಡಿತು.


ಸುಳ್ಯ, ಪುತ್ತೂರು, ಕಡಬ, ಬಂಟ್ವಾಳ ವಿಟ್ಲ, ಬೆಳ್ತಂಗಡಿ ಹಾಗೂ ಮಂಗಳೂರು ತಾಲೂಕುಗಳನ್ನು ಪ್ರತಿನಿಧಿಸಿರುವ ಸಂಘದ ಪದಾಧಿಕಾರಿಗಳು ಮತ್ತು ನಿರ್ದೇಶಕರುಗಳು ಹಾಗೂ ಗೌರವ ಸಲಹೆಗಾರರು ಉಪಸ್ಥಿತರಿದ್ದು ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಅಧ್ಯಕ್ಷರಾದ ಲೋಕಯ್ಯ ಗೌಡ ಕೆ. ಇವರಿಗೆ ಶುಭಾಶಯವನ್ನು ಕೋರಿದರು. ಲೋಕಯ್ಯ ಗೌಡರನ್ನು ಶಾಲು ಹೊದಿಸಿ ಮೈಸೂರು ಪೇಟ ತೊಡಿಸಿ ಗೌರವಿಸಲಾಯಿತು.

ಗೌರವ ಸ್ವೀಕರಿಸಿದ ಅಧ್ಯಕ್ಷರು, ಜಿಲ್ಲೆಯ ಗೌಡ ಒಕ್ಕಲಿಗ ಸಮಾಜ ಬಾಂಧವರು ತನಗೆ ವಹಿಸಿರುವ ಜವಾಬ್ದಾರಿಯನ್ನು ನಿಮ್ಮೆಲ್ಲರ ಸಹಕಾರದಿಂದ ಅತ್ಯುತ್ತಮವಾಗಿ ನಿರ್ವಹಿಸುತ್ತೇನೆ ಎಂದು ಭರವಸೆ ನೀಡಿದರು.