ಕೊಯಿಕುಳಿ ಶ್ರೀ ಕೃಷ್ಣ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ದುರ್ಗಾಪೂಜೆ

0

ದುಗ್ಗಲಡ್ಕದ ಕೊಯಿಕುಳಿ ಶ್ರೀ ಕೃಷ್ಣ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ದುರ್ಗಾಪೂಜೆ ಇಂದು ನಡೆಯಿತು.


ಬೆಳಿಗ್ಗೆ ಭಜನೆ , ದುರ್ಗಾಪೂಜೆ ಆರಂಭ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.


ಸೇವಾ ಸಮಿತಿಯ ಅಧ್ಯಕ್ಷ ಶಶಿಧರ ಎಂ.ಜೆ., ಕಾರ್ಯದರ್ಶಿ ಭವಾನಿಶಂಕರ ಕಲ್ಮಡ್ಕ, ಕೋಶಾಧಿಕಾರಿ ಭಾಸ್ಕರ ಪೂಜಾರಿ ಬಾಜಿನಡ್ಕ ಹಾಗೂ ಸಮಿತಿಯ ಸದಸ್ಯರು, ಊರವರು ಉಪಸ್ಥಿತರಿದ್ದರು. ಮಿತ್ರ ಕುರಲ್ ಶ್ರೀ ಕೃಷ್ಣ ಭಜನಾ ಮಂಡಳಿ ಕೊಯಿಕುಳಿ ಇವರು ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು.