ಆದಿದ್ರಾವಿಡ ಸಮ್ಮಿಲನ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

0

ಆದಿದ್ರಾವಿಡ ಯುವ ವೇದಿಕೆ – ದ. ಕ ಹಾಗೂ ಸುಳ್ಯ ತಾಲೂಕು ಸಮಿತಿ ಮಹಿಳಾ ಸಮಿತಿ ಗ್ರಾಮ ಘಟ ಸಮಿತಿಯ ನೇತೃತ್ವದಲ್ಲಿ ನಡೆಯಲಿರುವ ಆಡಿದ್ರಾವಿಡ ಸಮ್ಮಿಲನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಸುಳ್ಯದ ಗಾಂಧಿನಗರ ಶ್ರೀ ಕಲ್ಕುಡ ದೈವಸ್ಥಾನದಲ್ಲಿ ಬಿಡುಗಡೆ ಮಾಡಲಾಯಿತು.

ನ.17ರಂದು ಸುಳ್ಯದ ಗಾಂಧಿನಗರ ಶಾಲಾ ಮೈದಾನದಲ್ಲಿ ಕ್ರೀಡಾಕೂಟ ಹಾಗೂ ಜಿಲ್ಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ಮತ್ತು ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟ ನಡೆಯಲಿದೆ.ನ.24 ರಂದು ಸುಳ್ಯದ ಕೆವಿಜಿ ಪುರಭವನದಲ್ಲಿ ಹಲವು ಗಣ್ಯರ ಸಮ್ಮುಖದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ ಈ ಕಾರ್ಯಕ್ರಮದಲ್ಲಿ ಸುಳ್ಯದ ಜನಪ್ರಿಯ ಶಾಸಕರು ಕುಮಾರಿ ಭಾಗೀರಥಿ ಮುರುಳ್ಯ ಹಾಗೂ ಪುತ್ತೂರು ಶಾಸಕರಾದ ಅಶೋಕ್ ರೈ ಅತಿಥಿಗಳಾಗಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹಲವು ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮತ್ತು ಹಲವು ಕ್ಷೇತ್ರದಲ್ಲಿ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ನಡೆಯಲಿದೆ. ಆಮಂತ್ರಣ ಪತ್ರ ಬಿಡುಗಡೆ ಸಂದರ್ಭ ಸಂಘಟನೆಯ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.