ಹರಿಹರ ಪಲ್ಲತ್ತಡ್ಕ: ಮಕ್ಕಳ ಭಜನಾ ಶಿಬಿರದ ಸಮಾರೋಪ

0

ಹರಿಹರೇಶ್ವರ ದೇವಾಲಯದಲ್ಲಿ ನಡೆದ ಮಕ್ಕಳ ಭಜನಾ ಶಿಬಿರ ಆ.3 ರಂದು ಆರಂಭವಾಗಿದ್ದು ಸಮಾರೋಪ ಸಮಾರಂಭವು ಅ. 7ರಂದು ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ ಸಿ ಟ್ರಸ್ಟ್ ಸುಳ್ಯ, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಳ್ಯ ತಾಲೂಕು, ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಬ್ರಹ್ಮಣ್ಯ ವಲಯ ಶ್ರೀ ಹರಿಹರೇಶ್ವರ ದೇವಸ್ಥಾನ ಹರಿಹರ ಪಳ್ಳತ್ತಡ್ಕ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಸುಬ್ರಹ್ಮಣ್ಯ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಶ್ರೀ ಹರಿಹರೇಶ್ವರ ಕಲಾ ಮಂದಿರದಲ್ಲಿ ನಡೆಯಿತು.

ಸಮಾರೋಪ ಕಾರ್ಯಕ್ರಮದ ಅದ್ಯಕ್ಷತೆಯನ್ನು ಭಜನಾ ಪರಿಷತ್ ಸುಳ್ಯ ವಲಯ ಅಧ್ಯಕ್ಷರಾದ ಯತೀಶ್ ರೈ ದುಗ್ಗಲಡ್ಕ ವಹಿಸಿದ್ದರು.

ಮುಖ್ಯ ಅಥಿತಿಗಳಾಗಿ, ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಜುಗೋಡು, SKDRDP ಯೊಜನಾಧಿಕಾರಿ ಸುಳ್ಯ ಮಾಧವ ಗೌಡ, ಭಜನಾ ಪರಿಷತ್ ಸುಳ್ಯ ವಲಯ ಕಾರ್ಯದರ್ಶಿ ಸತೀಶ್ ಟಿ.ಎನ್, ವಲಯಾಧ್ಯಕ್ಷ ತೀರ್ಥರಾಮ ದೋಣಿಪಳ್ಳ, , ಹರಿಹರ ಪಲ್ಲತ್ತಡ್ಕ ಒಕ್ಕೂಟದ ಅಧ್ಯಕ್ಷರಾದ ಹರ್ಷ ಗೌಡ ಪಾಲ್ತಾಡು, ಬಾಳುಗೊಡು ಒಕ್ಕೂಟದ ಅಧ್ಯಕ್ಷರಾದ ನಾಗೇಶ್ ತಳೂರು, ಕೊಲ್ಲಮೊಗ್ರ ಬಿ ಒಕ್ಕೂಟದ ಅಧ್ಯಕ್ಷರಾದ ಹೇಮಂತ್, ಕೊತ್ನಡ್ಕ ಒಕ್ಕೂಟದ ಅಧ್ಯಕ್ಷರಾದ ತೀರ್ಥರಾಮ ಐನೆಕಿದು, ಒಕ್ಕೂಟದ ಅಧ್ಯಕ್ಷರಾದ ಮೀನಾಕ್ಷಿ ಕಲ್ಲೇರಿ,ಕಟ್ಟ, ಗೊವಿಂದನಗರ ಒಕ್ಕೂಟದ ಅಧ್ಯಕ್ಷರಾದ ವಿಜಯಲಕ್ಷ್ಮಿ, ಕಲ್ಮಕಾರ್ ಎ ಹಾಗು ಬಿ ಒಕ್ಕೂಟದ ಅದ್ಯಕ್ಷರಾದ ಶೇಷಪ್ಪ ಗೌಡ ಕೊಪ್ಪಡ್ಕ, ರಾಮಣ್ಣ ಗೌಡ ಕುಲ್ಕುಂದ, ಹರಿಪ್ರಸಾದ್ ಇವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಾರೋಪ ಸಮಾರಂಭದ ಮೊದಲು ಹರಿಹರ ಮುಖ್ಯ ಪೇಟೆಯಿಂದ ದೇವಸ್ಥಾನದವರೆಗೆ ಭಜನಾ ಶಿಬಿರದಲ್ಲಿ ಪಾಲ್ಗೊಂಡ ಮಕ್ಕಳಿಂದ ಕುಣಿತ ಭಜನಾ ಮೆರವಣಿಗೆ ನಡೆಯಿತು.


ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯದ ಮೇಲ್ವಿಚಾರಕರಾದ ಕೃಷ್ಣಪ್ಪ ಎಂ. ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಸುಬ್ರಹ್ಮಣ್ಯ ವಲಯದ ಅದ್ಯಕ್ಷರಾದ ಶ್ರೀ ದೇವಿ ಬಿ.ಕೆ,ಸುಬ್ರಹ್ಮಣ್ಯ ವಲಯದ ಭಜನಾ ಪರಿಷತ್ ಮತ್ತು ಪ್ರಗತಿ ಬಂದು ಸಂಘಗಳ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳು ಹಾಗು ಮಕ್ಕಳ ಪೋಷಕರು ಹಾಜರಿದ್ದರು. ಸೇವಾಪ್ರತಿನಿಧಿ ನಾಗವೇಣಿ ಸ್ವಾಗತಿಸಿ,ಶ್ರೀ ದೇವಿ ದನ್ಯವಾದಗೈದರು, ಕೃಷ್ಣಪ್ಪ ಕಾರ್ಯಕ್ರಮ ನಿರೂಪಿಸಿದರು
.