ಕೊಯನಾಡು; ಓವರ್ ಟೇಕ್ ಯತ್ನದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಇಳಿದ ಕಾರು

0

ವಾಹನವೊಂದನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಚರಂಡಿಗೆ ಇಳಿದು, ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಕೊಡಗು ಸಂಪಾಜೆ ಗ್ರಾಮದ ಅರಣ್ಯ ಇಲಾಖೆಯ ಬಳಿ ಅ.8ರಂದು ಬೆಳಿಗ್ಗೆ ಸಂಭವಿಸಿದೆ.

ಮಂಗಳೂರಿನಿಂದ ಮೈಸೂರು ದಸರಾ ವೀಕ್ಷಣಗೆ ತೆರಳುತ್ತಿದ್ದ ಕಾರಿನಲ್ಲಿ ಮಕ್ಕಳು ಸೇರಿದಂತೆ ಐದು ಮಂದಿ ಪ್ರಯಾಣಿಕರಿದ್ದರು.
ಕಾರಿನ ಚಾಲಕ ಸಂಪಾಜೆ ಅರಣ್ಯ ಇಲಾಖೆಯ ಬಳಿ ಮುಖ್ಯರಸ್ತೆಯಲ್ಲಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಯತ್ನದಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಚರಂಡಿಗೆ ಇಳಿದಿದ್ದು, ಅರಣ್ಯ ಇಲಾಖೆಯ ಸಿಬ್ಬಂದಿಗಳು ಮತ್ತು ಸ್ಥಳೀಯರು ಸೇರಿ ಪ್ರಯಾಣಿಕರನ್ನು ರಕ್ಷಿಸಿದರೆಂದು ತಿಳಿದುಬಂದಿದೆ.
ಘಟನೆಯಲ್ಲಿ ಕಾರಿನ ಮುಂಭಾಗ ಜಖಂಗೊಂಡಿದೆ.