ಸಂಪಾಜೆ ಸಹಕಾರಿ ಸಂಘದಿಂದ ಮರಣ ನಿಧಿ ಹಸ್ತಾಂತರ

0

ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರಾದ , ಇತ್ತೀಚೆಗೆ ಮೃತಪಟ್ಟ ಹರಿಣಾಕ್ಷಿ ಎ ಎನ್ ರವರ ಮನೆಗೆ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆಯವರು ತೆರಳಿ ಸಂಘದ ವತಿಯಿಂದ ನೀಡಲ್ಪಡುವ ಮರಣ ನಿಧಿ ರೂಪಾಯಿ ಹದಿನೈದು ಸಾವಿರವನ್ನು ಅವರ ಮನೆಯವರಿಗೆ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಗಣಪತಿ ಭಟ್ ಪಿ ಎನ್, ಆನಂದ ಪಿ ಎಲ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ವೀರೇಂದ್ರ ಕುಮಾರ್ ಜೈನ್ ಮತ್ತು ಸಿಬ್ಬಂದಿಯಾದ ಧನಂಜಯ ಎಂ ಪಿ ರವರು ಹಾಜರಿದ್ದರು.