ಸಂಪಾಜೆ ಸಹಕಾರಿ ಸಂಘದಿಂದ ಮರಣ ನಿಧಿ ಸಾಂತ್ವನ ಹಸ್ತಾಂತರ

0


ದ. ಕ. ಸಂಪಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರಾದ , ಇತ್ತೀಚೆಗೆ ಮೃತಪಟ್ಟ ಮಾಧವ ಡಿ ಎ ರವರ ಮನೆಗೆ ಸಂಘದ ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆಯವರು ತೆರಳಿ ಸಂಘದ ವತಿಯಿಂದ ನೀಡಲ್ಪಡುವ ಮರಣ ನಿಧಿ ರೂಪಾಯಿ ಹದಿನೈದು ಸಾವಿರವನ್ನು ಅವರ ಮನೆಯವರಿಗೆ ಹಸ್ತಾಂತರಿಸಿದರು.


ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಚಂದ್ರಶೇಖರ ಕೆ ಯು, ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ವೀರೇಂದ್ರ ಕುಮಾರ್ ಜೈನ್ ಮತ್ತು ಸಿಬ್ಬಂದಿಯಾದ ಧನಂಜಯ ಎಂ ಪಿ ರವರು ಹಾಜರಿದ್ದರು.