ಸೈಂಟ್ ಜೋಸೆಫ್ ವಿದ್ಯಾ ಸಂಸ್ಥೆ ವಿದ್ಯಾರ್ಥಿಗಳು ಯೋಗ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

0

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಸಿರಿಗೆರೆ ಚಿತ್ರದುರ್ಗದಲ್ಲಿ ನಡೆದ ರಾಜ್ಯಮಟ್ಟದ ಯೋಗ ಸ್ಪರ್ಧೆಯಲ್ಲಿ ಸುಳ್ಯದ ಸೈಂಟ್ ಜೋಸೆಫ್ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಟ್ರೆಡಿಶನಲ್ ವಿಭಾಗದಲ್ಲಿ ಕೆರೆಕ್ಕೊಡಿ ಕೃಷ್ಣಪ್ಪ ಗೌಡ ಹಾಗೂ ಪುಷ್ಪಾವತಿ ದಂಪತಿಗಳ ಪುತ್ರಿ ಹಾರ್ಧಿಕ ಕೆರೆಕೋಡಿ 6ನೇ ತರಗತಿ ನಾಲ್ಕನೇ ಸ್ಥಾನ , ಅಡ್ಕಾರ್ ಶರತ್ ಕುಮಾರ್ ಹಾಗೂ ಶೋಭಾಕುಮಾರಿ ದಂಪತಿಗಳ ಪುತ್ರಿ ಸೋನಾ ಅಡ್ಕಾರ್ 6ನೇ ತರಗತಿ ಐದನೇ ಸ್ಥಾನ ಪಡೆದು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

ಶಾಲಾ ಸಂಚಾಲಕರಾದ ರೆ. ಫಾ. ವಿಕ್ಟರ್ ಡಿ’ಸೋಜ, ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ರ ಮಾರ್ಗದರ್ಶನದಲ್ಲಿ, ತಂಡದ ವ್ಯವಸ್ಥಾಪಕಿಯಾಗಿ ದೈಹಿಕ ಶಿಕ್ಷಣ ಶಿಕ್ಷಕಿ ಪುಷ್ಪವೇಣಿ ಹುದೇರಿ ಸಹಕರಿಸಿ, ಸಂತೋಷ್ ಮುಂಡಕಜೆ ತರಬೇತಿ ನೀಡಿರುತ್ತಾರೆ.