ಅಡ್ಕಾರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಶ್ರೀ ದುರ್ಗಾ ತ್ರಿಕಾಲ ಪೂಜೆ ಹಾಗೂ ಆಯುಧಪೂಜೆ

0

ಜಾಲ್ಸೂರು ಗ್ರಾಮದ ಅಡ್ಕಾರಿನ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ಕದಿರು ವಿತರಣೆ, ನವಾನ್ನ ಭೋಜನ, ಶ್ರೀ ದುರ್ಗಾ ತ್ರಿಕಾಲ ಪೂಜೆ ಹಾಗೂ ಆಯುಧಪೂಜೆಯು ಅ.7ರಿಂದ ಅ.11ರವರೆಗೆ ನಡೆಯಿತು.

ಅ.7ರಂದು ಬೆಳಿಗ್ಗೆ ದೇಗಲುದಲ್ಲಿ ಕದಿರು ವಿನಿಯೋಗ, ಮಧ್ಯಾಹ್ನ ನವಾನ್ನ ಭೋಜನ ನಡೆಯಿತು.


ಅ.8ರಂದು ಶ್ರೀ ದುರ್ಗಾ ತ್ರಿಕಾಲ ಪೂಜೆ, ಮಧ್ಯಾಹ್ನ ಅನ್ನಸಂತರ್ಪಣೆ ಜರುಗಿತು.


ಅ.11ರಂದು ದೇಗುಲದ ವಠಾರದಲ್ಲಿ ವಿಶೇಷ ಆಯುಧಪೂಜೆ ನಡೆಯಿತು.

ಈ ಸಂದರ್ಭದಲ್ಲಿ ದೇವಸ್ಥಾನದ ಮೊಕ್ತೇಸರ ಗುರುರಾಜ್ ಭಟ್ ಅಡ್ಕಾರು, ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳು, ಮಾಜಿ ವ್ಯವಸ್ಥಾಪನ ಸಮಿತಿ ಪದಾಧಿಕಾರಿಗಳು,ಬೈಲುವಾರು ಸಮಿತಿಯ ಪದಾಧಿಕಾರಿಗಳು ಹಾಗೂ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.